News Karnataka Kannada
Wednesday, May 08 2024
ಉತ್ತರಕನ್ನಡ

ಕಾರವಾರ: ರಾಜ್ಯದಲ್ಲಿ ಸರಕಾರಿ ಅಂಬ್ಯುಲೆನ್ಸ್ ಸಮಸ್ಯೆ ಬಗೆಹರಿಸಲು ಕ್ರಮ ಎಂದ ಡಾ. ಕೆ. ಸುಧಾಕರ

Sudhakar
Photo Credit : By Author

ಕಾರವಾರ: ಸರ್ಕಾರಿ ಅಂಬ್ಯುಲೆನ್ಸ್ ಗಳ ಸೇವೆ ಮುಂದುವರೆದ ದೇಶದಲ್ಲಿ ಯಾವ ರೀತಿ ಇದೆಯೋ ಆ ರೀತಿ ಸೇವೆ ನೀಡುವುದು ಹೇಗೆ ಎಂದು ವರದಿ ನೀಡಲು ತಾಂತ್ರಿಕ ಸಲಹಾ ಸಮಿತಿ ರಚನೆ ಮಾಡಲಾಗಿದ್ದು, ಸಮಿತಿ ನೀಡಿದ ವರದಿಯ ಮೇಲೆ ಟೆಂಡರ್ ಕರೆಯಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ.

ಕಾರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ 108 ತುರ್ತು ಸೇವೆಯಲ್ಲಿ ಸಮಸ್ಯೆ ಆಗುತ್ತಿರುವ ಹಿನ್ನಲೆ ಕಾರವಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಮುಂದೆ ಇಂತಹ ಸಮಸ್ಯೆ ಆಗದಂತೆ ಮಾದರಿ ತುರ್ತು ಅಂಬ್ಯುಲೆನ್ಸ್ ಸೇವೆ ರಾಜ್ಯದಲ್ಲಿ ನೀಡಲಾಗುವುದು ಎಂದರು.

108 ತುರ್ತು ಅಂಬ್ಯುಲೆನ್ಸ್ ಸೇವೆ 2006- 07ರಲ್ಲಿ ಪ್ರಾರಂಭವಾಗಿತ್ತು. ಆಗ ಟೆಂಡರ್ ಮೂಲಕ ನಿರ್ವಹಣೆಗೆ ನೀಡಿರಲಿಲ್ಲ. ಸತ್ಯಂ ಎನ್ನುವ ಸಂಸ್ಥೆಗೆ ನಿರ್ವಹಣೆಗೆ ನೀಡಲಾಗಿತ್ತು. ಆಗ ಯಾವುದೇ ಸಮಸ್ಯೆ ಇರಲಿಲ್ಲ. ನಂತರ‌ಜಿ.ವಿ.ಕೆ ಸಂಸ್ಥೆಗೆ ನಿರ್ವಹಣೆಗೆ ನೀಡಲಾಗಿದೆ. ಆದರೆ ಇತ್ತೀಚಿಗೆ ಈ ಸಂಸ್ಥೆ ಸೇವೆ ಸರಿಯಾಗಿ ನೀಡುತ್ತಿಲ್ಲ ಎಂದರು.

ಕಳೆದ ಎರಡು ತಿಂಗಳಿಂದ ಜಿವಿಕೆ ಸಂಸ್ಥೆ ಸಿಬ್ಬಂದಿಗೆ ವೇತನ ನೀಡಿಲ್ಲ. ಹಾಗಂತ ಸರ್ಕಾರ ಸಂಸ್ಥೆಗೆ ಅನುದಾನ ನೀಡಿದೆ. ಒಂದೂವರೆ- ಎರಡು ತಿಂಗಳಲ್ಲಿ ಎಲ್ಲಾ ಸಮಸ್ಯೆ ಈಡೇರಲಿದೆ. ಅಲ್ಲಿಯವರೆಗೆ ಜನರಿಗೆ ಯಾವುದೇ ಸಮಸ್ಯೆ ಆಗದಂತೆ ರಾಜ್ಯದಲ್ಲಿ ಅಂಬ್ಯುಲೆನ್ಸ್ ಸೇವೆ ನೀಡಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು