ಕಾರವಾರ(ಜ. 22) : ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಜಾಲಿ ಕ್ರಾಸ್ ಬಳಿ ನಡೆದಿದೆ. ಹೃದಯಾಘಾತಕ್ಕೊಳಗಾಗಿದ್ದ ವ್ಯಕ್ತಿಯನ್ನು ಹೊನ್ನಾವರದ ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಮಣಿಪಾಲಕ್ಕೆ ಕರೆದೊಯ್ಯಲಾಗುತ್ತಿತ್ತು.
ಕಂಟೇನರ್ ಎದುರಿನ ಕಾರು ಏಕಾಏಕಿ ಬ್ರೇಕ್ ಹಾಕಿದ್ದರಿಂದ ಚಾಲಕ ಲಾರಿ ನಿಲ್ಲಿಸಿದ್ದಾನೆ. ಇದರಿಂದ ವೇಗವಾಗಿ ಹೊರಟಿದ್ದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.
ಆಂಬ್ಯುಲೆನ್ಸ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಅಂಬ್ಯುಲೆನ್ಸ್ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸ್ಥಳಕ್ಕೆ ಪೋಲೀಸ್ ಭೇಟಿ ನೀಡಿದ್ದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.