News Karnataka Kannada
Sunday, April 28 2024
ಉತ್ತರಕನ್ನಡ

ನಾಗರಿಕ ವಿಮಾನ ನಿಲ್ದಾಣದ ಯೋಜನೆಯಿಂದ ನಿರಾಶ್ರಿತರಾಗುವ ಜನರು ಯಾರೂ ಹತಾಶರಾಗುವ ಅಗತ್ಯತೆ ಇಲ್ಲ : ಶಿವರಾಮ ಹೆಬ್ಬಾರ್

Shivaram Hebbar
Photo Credit :

ಅಂಕೋಲಾ: ತಾಲೂಕಿನ ಅಲಗೇರಿಯಲ್ಲಿ ನಿರ್ಮಾಣವಾಗಲಿರುವ ನಾಗರಿಕ ವಿಮಾನ ನಿಲ್ದಾಣದ ಯೋಜನೆಯಿಂದ ನಿರಾಶ್ರಿತರಾಗುವ ಜನರು ಯಾರೂ ಹತಾಶರಾಗುವ ಅಗತ್ಯತೆ ಇಲ್ಲ ಸಂಪೂರ್ಣ ಸರ್ಕಾರ ನಿರಾಶ್ರಿತರ ಜೊತೆಯಲ್ಲಿ ಸದಾ ಬೆನ್ನೆಲುಬಾಗಿ ನಿಲ್ಲಲಿದೆ,ಯಾರೂ ಉದ್ವೇಗ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ಹೇಳಿದರು.

ಅಂಕೋಲಾದ ನಾಡವರ ಸಭಾ ಭವನದಲ್ಲಿ ನಡೆದ ಅಲಗೇರಿ, ಬೆಲೇಕೇರಿ, ಭಾವಿಕೇರಿ ಪಂಚಾಯಿತಿ ವ್ಯಾಪ್ತಿಯ ವಿಮಾನ ನಿಲ್ದಾಣ ನಿಲ್ದಾಣ ಕಾಮಗಾರಿಗೆ ಭೂಮಿ ಕಳೆಕೊಳ್ಳುವ ಜನರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಅಲಗೇರಿ ವಿಮಾನ ನಿಲ್ದಾಣ ಒಂದು ರಾಷ್ಟ್ರ ಮಟ್ಟದ ಯೋಜನೆಯಾಗಿದ್ದು ಎಲ್ಲಾ ರಾಜಕೀಯ ಪಕ್ಷಗಳು ಸಹ ವಿಮಾನ ನಿಲ್ದಾಣ ಆಗಬೇಕು ಎಂದು ಸಮ್ಮತಿ ವ್ಯಕ್ತಪಡಿಸಿವೆ ಈ ಕುರಿತು ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲು ಸಮಿತಿಯೊಂದನ್ನು ರಚಿಸುವ ಮೂಲಕ
ಯೋಗ್ಯ ರೀತಿಯಲ್ಲಿ ಚಿಂತನೆ ನಡೆಸುವಂತೆ ತಿಳಿಸಿದರು.

ಮೂಲ ಭೂಮಿಯನ್ನು ಕಳೆದುಕೊಂಡವರಿಗೆ ಆ ಭೂಮಿಯ ಸ್ಥಾನದ ಭೂಮಿ ನೀಡಲು ಸಾಧ್ಯವಿಲ್ಲದಿದ್ದರೂ ಪರ್ಯಾಯವಾಗಿ ಉತ್ತಮ ಬದುಕು ರೂಪಿಸಲು ಸಾಧ್ಯವಾಗುವಂತಹ ಸ್ಥಳ ನೀಡುವ ಮೂಲಕ ಸರ್ಕಾರ ನ್ಯಾಯಯುತವಾಗಿ ಸಹಕರಿಸಲಿದೆ
ಎಂದರು.

ಶಾಸಕಿ ರೂಪಾಲಿ ನಾಯ್ಕ ಮಾತನಾಡಿ ಉತ್ತಮ ಯೋಜನೆಗಳ ಮೂಲಕ ಈ ಭಾಗದ ಜನರು ಅಭಿವೃದ್ಧಿ ಆಗಬೇಕು ಎನ್ನುವುದು ತಮ್ಮ ಕನಸಾಗಿದ್ದು ಜನರ ಭಾವನೆಗಳ ಜೊತೆ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ, ನಿರಾಶ್ರಿತರಿಗೆ ಅಲಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೇ ಪುನರ್ವಸತಿ ಕಲ್ಪಿಸಲು ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಮಾತನಾಡಿದರು. ಜಿ.ಪಂ ಕಾರ್ಯನಿರ್ವಹಣ ಅಧಿಕಾರಿ ಪ್ರಿಯಾಂಗಾ, ಸಹಾಯಕ ಆಯುಕ್ತ ರಾಹುಲ್ ಪಾಂಡೆ, ಜಿಲ್ಲಾ ಪೊಲೀಸ್ ವರಿಷ್ಠ ಶಿವಪ್ರಕಾಶ ದೇವರಾಜು ಉಪಸ್ಥಿತರಿದ್ದರು.
ಸ್ಥಳೀಯರ ಪರವಾಗಿ ಸುರೇಶ ನಾಯಕ ಅಲಗೇರಿ, ದೇವರಾಯ ನಾಯ್ಕ, ಗೌರೀಶ ನಾಯಕ ಮಾತನಾಡಿ ಯೋಜನೆ ಕೈಬಿಡುವಂತೆ ಆಗ್ರಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು