News Karnataka Kannada
Monday, April 29 2024
ಉತ್ತರಕನ್ನಡ

ಬೇಡ ಎಂದರೂ ಕಾಂಗ್ರೆಸ್‌ನವರು ದಿನಕ್ಕೊಂದು ಸಮಸ್ಯೆ ಸೃಷ್ಟಿಸುತ್ತಿದ್ದಾರೆ; ಅಶೋಕ್

Mandya: Soon India will become Congress free country says R Ashok
Photo Credit :

ಅಚವೆ (ಕಾರವಾರ) : ‘ಬೇಡ ಎಂದರೂ ಕಾಂಗ್ರೆಸ್‌ನವರು ದಿನಕ್ಕೊಂದು ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಏನು ಮಾಡಿದರು ಎಂದು ಹೇಳಲು ಸಿದ್ಧರಿಲ್ಲ. 50 ವರ್ಷ ದೇಶವನ್ನು ಆಳುವ ಅವಕಾಶ ಯಾವ ಪಕ್ಷಕ್ಕೂ ಸಿಕ್ಕಿಲ್ಲ.

ಆದರೆ, ಅವರು ಗರೀಬಿ ಹಠಾವೋ ಘೋಷಣೆ ಬಿಟ್ಟರೆ ಮತ್ತೇನೂ ಮಾಡಿಲ್ಲ. ಬಡವರನ್ನು ತುಳಿದಿದ್ದಾರೆ’ ಎಂದು ಕಂದಾಯ ಸಚಿವ ಆರ್. ಅಶೋಕ್ ಟೀಕಿಸಿದರು. ಅಂಕೋಲಾ ತಾಲ್ಲೂಕಿನ ಅಚವೆ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ‘ಕಂದಾಯ ಸಚಿವರ ಗ್ರಾಮ ವಾಸ್ತವ್ಯ’ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಚುನಾವಣೆ ಹತ್ತಿರವಾಗುತ್ತಿದೆ. ಹಾಗಾಗಿ ಪ್ರತಿದಿನ ಯಾವುದಾದರೂ ವಿಷಯವನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಆಪಾದನೆ ಮಾಡುವುದು ಅವರಿಗೆ ಪರಿಪಾಠವಾಗಿದೆ. ಇದು ಮುಂದಿನ ದಿನಗಳಲ್ಲಿ ಇನ್ನೂ ಜಾಸ್ತಿಯಾಗುತ್ತದೆ. ಕಾಂಗ‌್ರೆಸ್‌ನ ನಡೆ ಆಪಾದನೆಗಳ ಕಡೆ ಎಂಬಂತಾಗಿದೆ. ಅಧಿಕಾರದಲ್ಲಿದ್ದಾಗ ನೀವೇನು ಮಾಡಿದ್ದೀರಿ ಎಂದು ಕೇಳಿದರೆ, ನಾವು ತಪ್ಪು ಮಾಡಿದ್ದೇವೆ ಬಿಡ್ರಿ. ನೀವು ಒಳ್ಳೆಯ ಕೆಲಸ ಮಾಡಿ ಎಂದು ವಿಧಾನಸಭೆ ಕಲಾಪದಲ್ಲೇ ನಮಗೆ ಉಪದೇಶ ಮಾಡುತ್ತಾರೆ’ ಎಂದರು.

‘ಈಶ್ವರಪ್ಪ ಪ್ರಕರಣವೂ ಕಾಂಗ್ರೆಸ್‌ನವರ ಆಪಾದನೆಯೇ’ ಎಂದು ಪ್ರಶ್ನಿಸಿದಾಗ, ‘ಕಾನೂನಿದೆ. ಅದರ ಅಡಿಯಲ್ಲಿ ಎಲ್ಲರೂ ಸಮಾನರು. ನಮಗೊಂದು, ಬೇರೆಯವರಿಗೊಂದು ಇಲ್ಲ. ಅದರ ಪ್ರಕಾರವೇ ಕ್ರಮವಾಗುತ್ತದೆ’ ಎಂದು ಪ್ರತಿಕ್ರಿಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು