ಮಳವಳ್ಳಿ: ತಾಲ್ಲೂಕಿನ ಬಿಜಿಪುರ ಹೋಬಳಿಯ ಹೊಸಹಳ್ಳಿ ಗ್ರಾಮದ ಬಳಿ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.
ಕಿರುಗಾವಲು ಹೋಬಳಿಯ ಅಣಸಾಲೆ ಗ್ರಾಮದ ಶಶಿಕುಮಾರ್ (23) ಮೃತಪಟ್ಟ ಯುವಕ. ಮಾಗನೂರು ಗ್ರಾಮದ ನಂಜುಂಡ(40) ಪೂರ್ಣಿಮಾ ಗಂಭೀರವಾಗಿ ಗಾಯಗೊಂಡವವರು.
ಮಾಗನೂರು ಗ್ರಾಮದಿಂದ ಕೊಳ್ಳೇಗಾಲದ ಚಲುವಹಳ್ಳಿ ಗ್ರಾಮದಲ್ಲಿ ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆ ತಮ್ಮ ಬೈಕ್ ನಲ್ಲಿ ನಂಜುಂಡ ಮತ್ತು ಪೂರ್ಣಿಮಾ ಹೋಗುತ್ತಿದ್ದ ವೇಳೆ ಹೊಸಹಳ್ಳಿ ಕಡೆಯಿಂದ ಬರುತ್ತಿದ್ದ ಶಶಿಕುರ್ಮಾ ಅವರ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಈ ವೇಳೆ ಶಶಿಕುಮಾರ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಬೆಳಕವಾಡಿ ಆಸ್ಪತ್ರೆಯ ಶವಗಾರಕ್ಕೆ ಶವವನ್ನು ಸಾಗಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ನಂಜುಂಡ ಮತ್ತು ಪೂರ್ಣಿಮಾ ಅವರಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಸಿಪಿಐ ಡಿ.ಪಿ.ಧನರಾಜ್, ಬೆಳಕವಾಡಿ ಪಿಎಸ್ಐ ಕೆ.ಎಂ.ಮಹೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಬೆಳಕವಾಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.