ಮಾಜಾಳಿ ಮಾರ್ಕೆಪೂನವ್ ವಿಶೇಷ ಜಾತ್ರೆ ಆಚರಣೆ

ಕಾರವಾರ:ಜಿಲ್ಲೆಯ ಗಡಿ ಗ್ರಾಮವಾಗಿರುವ ಮಾಜಾಳಿಯಲ್ಲಿ ಮಾರ್ಕೆಪೂನವ್ ಜಾತ್ರಾ ಮಹೋತ್ಸವ ಸಂಭ್ರಮದಿಂದ ನಡೆಯಿತುಜಾತ್ರೆಯಲ್ಲಿ ಹರಕೆಯ ಅಂಗವಾಗಿ  ಗಂಡು ಮಕ್ಕಳಿಗೆ ಹೊಟ್ಟೆ ಭಾಗಕ್ಕೆ ಸೂಜಿ ಚುಚ್ಚಿ ದಾರ ಪೋಣಿಸುವುದುಹೆಣ್ಣು ಮಕ್ಕಳು ಕುಲದೇವರಿಗೆ ದೀಪ ಹಚ್ಚುವ ಮೂಲಕ ವಿಶೇಷವಾಗಿ ಆಚರಿಸಿದರು.

ಪ್ರೌಢಾವಸ್ಥೆಯ ಪೂರ್ವದಲ್ಲಿ ಗಂಡು ಮಕ್ಕಳು ಹೊಕ್ಕಳ ಬಳಿ ದಾರ ಪೋಣಿಸುವುದು ಅನಾದಿಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿಯಾಗಿದೆಇದರಿಂದ ಮಕ್ಕಳ ಭವಿಷ್ಯ ಒಳ್ಳೆಯದಾಗುತ್ತದೆ ಎನ್ನುವುದು ಇಲ್ಲಿನ ಜನರ ನಂಬಿಕೆಯಾಗಿದೆ.

`ದಾಡ್‘ ದೇವಸ್ಥಾನದಲ್ಲಿ ೨೦ಕ್ಕೂ ಹೆಚ್ಚು ಗಂಡು ಮಕ್ಕಳು ಅರ್ಚಕರಿಂದ ದಾರ ಪೋಣಿಸಿಕೊಂಡು ಹರಕೆ ಅರ್ಪಿಸಿದರುಮಕ್ಕಳ ಪಾಲಕರೇ ತಂದಿದ್ದ ಸೂಜಿ ದಾರವನ್ನು ಅರ್ಚಕರು ಪೋಣಿಸಿ ಹೊಟ್ಟೆ ಭಾಗದಲ್ಲಿ ಸೂಜಿ ಚುಚ್ಚಿ ಒಂದು ಗಂಟು ಹಾಕುತ್ತಾರೆಶ್ರೀರಾಮನಾಥ ಕ್ಷೇತ್ರದ ಪರಿವಾರ ದೇವರ ಜಾತ್ರೆ ಇದಾಗಿದ್ದುಪ್ರತಿ ವರ್ಷ ಶುದ್ಧ ಪೂರ್ಣಿಮೆಯಂದು  ಜಾತ್ರೆ ಜರುಗುತ್ತದೆಹುಣ್ಣಿಮೆಗೆ ಕೊಂಕಣಿ ಭಾಷೆಯಲ್ಲಿ ಪೂನವ್ ಎನ್ನುತ್ತಾರೆಹೀಗಾಗಿ  ಜಾತ್ರೆಯನ್ನು `ಮಾರ್ಕೆಪೂನವ್‘ ಎಂದು ಕರೆಯುತ್ತಾರೆಅದರಂತೆ ಹೆಣ್ಣು ಮಕ್ಕಳು ಕುಲದೇವರಿಗೆ ದೀವಜ್ (ದೀಪನೀಡಿ ಹರಕೆ ಅರ್ಪಿಸಿದರು ಗ್ರಾಮದ ಹುಡುಗಿ ಅಥವಾ ಸೊಸೆಯಾಗಿ ಗ್ರಾಮಕ್ಕೆ ಕಾಲಿರಿಸಿದವಳು ತಲೆ ಮೇಲೆ ದೀಪವನ್ನಿರಿಸಿಕೊಂಡು `ದಾಡ್‘ ದೇವಸ್ಥಾನದಿಂದ `ಮಾರಿಕಾ ದೇವಿ‘ (ದೇವತಿದೇವಸ್ಥಾನದವರೆಗೆ ಕಾಲ್ನಡಿಗೆಯಲ್ಲಿ ಬಂದು ಅಲ್ಲಿನ ದೇವತೆಗೆ ತಾವು ಹೊತ್ತು ತಂದ ದೀಪ ತೋರಿಸಿ ಭಕ್ತಿ ಪ್ರದರ್ಶಿಸಿದರು.

`ಮಾರಿಕಾ ದೇವಿಗೆ ದೀಪದಿಂದ ಆರತಿ ಬೆಳಗುವುದರಿಂದ ಆಕೆ ಕುಲದೇವರ ಪ್ರೀತಿಗೆ ಪಾತ್ರಳಾಗುತ್ತಾಳೆ ಎನ್ನುವುದು ನಂಬಿಕೆ ಹಾಗೂ ದಾಡ್ ದೇವಸ್ಥಾನದಲ್ಲಿ ಗಂಡು ಮಕ್ಕಳು ಪೋಣಿಸಿಕೊಂಡ ದಾರವನ್ನು ಮಾರಿಕಾ ದೇವಿಯ ದೇವಸ್ಥಾನದಲ್ಲಿ ತೆಗೆಯಲಾಗುತ್ತದೆ

Swathi MG

Recent Posts

ಕರೆಂಟ್ ಕಟ್‌ನಿಂದಾಗಿ ಜನರ ಜೀವನ ಕತ್ತಲು: ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಚಿಕ್ಕ ಮಳೆ ಬಂದರೆ ಸಾಕು ಕೆಲವೊಂದು ಭಾಗಗಳಲ್ಲಿ ಕರೆಂಟ್ ಇಲ್ಲದೆ, ಕತ್ತಲಲ್ಲಿ ಜೀವನ ನಡೆಸುವಂತಾಗಿದೆ.…

27 mins ago

ತೋಟಗಾರಿಕೆ ಇಲಾಖೆಯಿಂದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ

ಜಿಲ್ಲೆಯಾದ್ಯಂತ 8 ಸಾವಿರ ಎಕರೆ ಮಾವು ಬೆಳೆಯನ್ನು ಬೆಳೆಯಲಾಗುತ್ತಿದ್ದು, ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಕೆಗೆ ಉತ್ತಮ ಗುಣಮಟ್ಟದ ಮಾವು ನೀಡಬೇಕೆನ್ನುವ ಉದ್ದೇಶದಿಂದ…

43 mins ago

ಕಬಿನಿ ಹಿನ್ನೀರಿನಲ್ಲಿ ‘ಜ್ಯೂನಿಯರ್‌ ಅರ್ಜುನ’ ಪ್ರತ್ಯಕ್ಷ !

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮದವೇರಿದ ಸಲಗ ನಡೆಸಿದ ದಾಳಿಗೆ ಉಸಿರು ನಿಲ್ಲಿಸಿದ ದಸರಾ ಆನೆ ಅರ್ಜುನನ ನೆನಪು ಮಾಸುವ…

52 mins ago

ಎಣ್ಣೆ ಸಾಲ ಕೊಡಲಿಲ್ಲ ಎಂದು ಬಾರ್ ಮಾಲೀಕನ ಮೇಲೆ ಹಲ್ಲೆ: ಆರೋಪಿ ವಶಕ್ಕೆ

ಮದ್ಯದಂಗಡಿಯಲ್ಲಿ ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.

56 mins ago

ಆರ್​​​ಸಿಬಿ ತಂಡಕ್ಕೆ ಕೈ ಕೊಟ್ಟ​ ವಿಲ್ ಜಾಕ್ಸ್​​

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್​​ ಮುಕ್ತಾಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್​ ಶಾಕ್​ ಕಾದಿದೆ. ಪ್ಲೇ…

57 mins ago

ಉಡುಪಿ ಶ್ರೀಕೃಷ್ಣಮಠಕ್ಕೆ ಮಾಜಿ ಕ್ರಿಕೆಟ್ ಆಟಗಾರ ರವಿಶಾಸ್ತ್ರಿ ಭೇಟಿ

ಉಡುಪಿ ಶ್ರೀಕೃಷ್ಣ ಮಠಕ್ಕೆ ಇಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಅವರು ಭೇಟಿ ನೀಡಿ ದೇವರ ದರ್ಶನ…

1 hour ago