ಕಾರವಾರ:ಜಿಲ್ಲೆಯ ಗಡಿ ಗ್ರಾಮವಾಗಿರುವ ಮಾಜಾಳಿಯಲ್ಲಿ ಮಾರ್ಕೆಪೂನವ್ ಜಾತ್ರಾ ಮಹೋತ್ಸವ ಸಂಭ್ರಮದಿಂದ ನಡೆಯಿತು. ಜಾತ್ರೆಯಲ್ಲಿ ಹರಕೆಯ ಅಂಗವಾಗಿ ಗಂಡು ಮಕ್ಕಳಿಗೆ ಹೊಟ್ಟೆ ಭಾಗಕ್ಕೆ ಸೂಜಿ ಚುಚ್ಚಿ ದಾರ ಪೋಣಿಸುವುದು, ಹೆಣ್ಣು ಮಕ್ಕಳು ಕುಲದೇವರಿಗೆ ದೀಪ ಹಚ್ಚುವ ಮೂಲಕ ವಿಶೇಷವಾಗಿ ಆಚರಿಸಿದರು.
ಪ್ರೌಢಾವಸ್ಥೆಯ ಪೂರ್ವದಲ್ಲಿ ಗಂಡು ಮಕ್ಕಳು ಹೊಕ್ಕಳ ಬಳಿ ದಾರ ಪೋಣಿಸುವುದು ಅನಾದಿಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿಯಾಗಿದೆ. ಇದರಿಂದ ಮಕ್ಕಳ ಭವಿಷ್ಯ ಒಳ್ಳೆಯದಾಗುತ್ತದೆ ಎನ್ನುವುದು ಇಲ್ಲಿನ ಜನರ ನಂಬಿಕೆಯಾಗಿದೆ.
`ದಾಡ್‘ ದೇವಸ್ಥಾನದಲ್ಲಿ ೨೦ಕ್ಕೂ ಹೆಚ್ಚು ಗಂಡು ಮಕ್ಕಳು ಅರ್ಚಕರಿಂದ ದಾರ ಪೋಣಿಸಿಕೊಂಡು ಹರಕೆ ಅರ್ಪಿಸಿದರು. ಮಕ್ಕಳ ಪಾಲಕರೇ ತಂದಿದ್ದ ಸೂಜಿ ದಾರವನ್ನು ಅರ್ಚಕರು ಪೋಣಿಸಿ ಹೊಟ್ಟೆ ಭಾಗದಲ್ಲಿ ಸೂಜಿ ಚುಚ್ಚಿ ಒಂದು ಗಂಟು ಹಾಕುತ್ತಾರೆ. ಶ್ರೀರಾಮನಾಥ ಕ್ಷೇತ್ರದ ಪರಿವಾರ ದೇವರ ಜಾತ್ರೆ ಇದಾಗಿದ್ದು, ಪ್ರತಿ ವರ್ಷ ಶುದ್ಧ ಪೂರ್ಣಿಮೆಯಂದು ಈ ಜಾತ್ರೆ ಜರುಗುತ್ತದೆ. ಹುಣ್ಣಿಮೆಗೆ ಕೊಂಕಣಿ ಭಾಷೆಯಲ್ಲಿ ಪೂನವ್ ಎನ್ನುತ್ತಾರೆ. ಹೀಗಾಗಿ ಈ ಜಾತ್ರೆಯನ್ನು `ಮಾರ್ಕೆಪೂನವ್‘ ಎಂದು ಕರೆಯುತ್ತಾರೆ. ಅದರಂತೆ ಹೆಣ್ಣು ಮಕ್ಕಳು ಕುಲದೇವರಿಗೆ ದೀವಜ್ (ದೀಪ) ನೀಡಿ ಹರಕೆ ಅರ್ಪಿಸಿದರು. ಈ ಗ್ರಾಮದ ಹುಡುಗಿ ಅಥವಾ ಸೊಸೆಯಾಗಿ ಗ್ರಾಮಕ್ಕೆ ಕಾಲಿರಿಸಿದವಳು ತಲೆ ಮೇಲೆ ದೀಪವನ್ನಿರಿಸಿಕೊಂಡು `ದಾಡ್‘ ದೇವಸ್ಥಾನದಿಂದ `ಮಾರಿಕಾ ದೇವಿ‘ (ದೇವತಿ) ದೇವಸ್ಥಾನದವರೆಗೆ ಕಾಲ್ನಡಿಗೆಯಲ್ಲಿ ಬಂದು ಅಲ್ಲಿನ ದೇವತೆಗೆ ತಾವು ಹೊತ್ತು ತಂದ ದೀಪ ತೋರಿಸಿ ಭಕ್ತಿ ಪ್ರದರ್ಶಿಸಿದರು.
`ಮಾರಿಕಾ ದೇವಿಗೆ ದೀಪದಿಂದ ಆರತಿ ಬೆಳಗುವುದರಿಂದ ಆಕೆ ಕುಲದೇವರ ಪ್ರೀತಿಗೆ ಪಾತ್ರಳಾಗುತ್ತಾಳೆ ಎನ್ನುವುದು ನಂಬಿಕೆ ಹಾಗೂ ದಾಡ್ ದೇವಸ್ಥಾನದಲ್ಲಿ ಗಂಡು ಮಕ್ಕಳು ಪೋಣಿಸಿಕೊಂಡ ದಾರವನ್ನು ಮಾರಿಕಾ ದೇವಿಯ ದೇವಸ್ಥಾನದಲ್ಲಿ ತೆಗೆಯಲಾಗುತ್ತದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಚಿಕ್ಕ ಮಳೆ ಬಂದರೆ ಸಾಕು ಕೆಲವೊಂದು ಭಾಗಗಳಲ್ಲಿ ಕರೆಂಟ್ ಇಲ್ಲದೆ, ಕತ್ತಲಲ್ಲಿ ಜೀವನ ನಡೆಸುವಂತಾಗಿದೆ.…
ಜಿಲ್ಲೆಯಾದ್ಯಂತ 8 ಸಾವಿರ ಎಕರೆ ಮಾವು ಬೆಳೆಯನ್ನು ಬೆಳೆಯಲಾಗುತ್ತಿದ್ದು, ಸಾರ್ವಜನಿಕರಿಗೆ ಹಾಗೂ ಗ್ರಾಹಕರಿಕೆಗೆ ಉತ್ತಮ ಗುಣಮಟ್ಟದ ಮಾವು ನೀಡಬೇಕೆನ್ನುವ ಉದ್ದೇಶದಿಂದ…
ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮದವೇರಿದ ಸಲಗ ನಡೆಸಿದ ದಾಳಿಗೆ ಉಸಿರು ನಿಲ್ಲಿಸಿದ ದಸರಾ ಆನೆ ಅರ್ಜುನನ ನೆನಪು ಮಾಸುವ…
ಮದ್ಯದಂಗಡಿಯಲ್ಲಿ ಎಣ್ಣೆ ಸಾಲ ಕೊಡದಿದಕ್ಕೆ ಬಾರ್ ಮಾಲೀಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಮುಕ್ತಾಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್ ಶಾಕ್ ಕಾದಿದೆ. ಪ್ಲೇ…
ಉಡುಪಿ ಶ್ರೀಕೃಷ್ಣ ಮಠಕ್ಕೆ ಇಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಅವರು ಭೇಟಿ ನೀಡಿ ದೇವರ ದರ್ಶನ…