News Karnataka Kannada
Sunday, April 28 2024
ಉತ್ತರಕನ್ನಡ

ಯಾವುದೇ ಪರವಾನಗಿ ಇಲ್ಲದೇ ಸಾಗಿಸುತ್ತಿದ್ದ 17 ಕೋಣಗಳ ರಕ್ಷಣೆ

Buffalos
Photo Credit :

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಮೂಲಕ ಭಟ್ಕಳ, ಮಂಗಳೂರು, ಕೇರಳ ಭಾಗಗಳಿಗೆ ಅಕ್ರಮ ಜಾನುವಾರುಗಳ ಸಾಗಟ ಜಾಲ ನಿರಂತರವಾಗಿ ಮುಂದುವರಿದಿದ್ದು, ಅಂಕೋಲಾ ತಾಲೂಕಿನ ಕೊಡಸಣಿ ಕ್ರಾಸ್ ಬಳಿ ಲಾರಿಯೊಂದರಲ್ಲಿ ಹಿಂಸಾತ್ಮಕವಾಗಿ ಯಾವುದೇ ಪರವಾನಗಿ ಇಲ್ಲದೇ ಸಾಗಿಸುತ್ತಿದ್ದ 17 ಕೋಣಗಳನ್ನು ಅಂಕೋಲಾ ಪೊಲೀಸರು ರಕ್ಷಿಸಿದ್ದಾರೆ.

ಲಾರಿ, ಮತ್ತು ಬೆಂಗಾವಲಾಗಿ ಬಂದಿದ್ದ ಇನೋವಾ ವಾಹನ ಸೇರಿದಂತೆ ಸುಮಾರು 12 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಬೆಳ್ತಂಗಡಿ ನಿವಾಸಿ ಲಾರಿ ಚಾಲಕ ಹೈದರ್ ರೆಹಮನ್ ಬ್ಯಾರಿ(40) ಅಂಕೋಲಾ ಶಿರಗುಂಜಿಯ ಬೊಮ್ಮಯ್ಯ ಬೀರಣ್ಣ ನಾಯಕ(80) ಹಾಸನ ಹಳೇಕೊಪ್ಪಲಿನ ಮಂಜೇಗೌಡ ಜವರೇಗೌಡ(62) ಕೇರಳ ಕಾಸರಗೋಡದ ಅಬ್ದುಲ್ ರಿಯಾಜ್ ಮಹಮ್ಮದ್ (27) ಬಂಧಿತ ಆರೋಪಿಗಳಾಗಿದ್ದು ಇನ್ನೊರ್ವ ಆರೋಪಿ ಕೇರಳದ ಅಬುಬಕರ್ ರಿಯಾಜ್ ಎಂಬಾತ ತಪ್ಪಿಸಿಕೊಂಡು ಓಡಿ ಹೋಗಿದ್ದಾನೆ.

ಆರೋಪಿತರಿಂದ 2ಲಕ್ಷ 25 ಸಾವಿರ ಮೌಲ್ಯದ 17 ಕೋಣಗಳು, 6ಲಕ್ಷ ಮೌಲ್ಯದ ಲಾರಿ 3 ಲಕ್ಷ ಮೌಲ್ಯದ ಇನೋವಾ ವಾಹನ, 47 ಸಾವಿರ ಮೌಲ್ಯದ ಮೂರು ಮೊಬೈಲ್ ಪೋನುಗಳು ಮತ್ತು 30 ಸಾವಿರ ನಗದು ಹಣ ವಶಪಡಿಸಿಕೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು