News Karnataka Kannada
Saturday, May 04 2024
ಉತ್ತರಕನ್ನಡ

ವೈನ್ ಶಾಪ್ ಗೆ ಕನ್ನ ಹಾಕಿದ ಅಂತಾರಾಜ್ಯ ಕಳ್ಳನ ಬಂಧನ

Arrest 22082021
Photo Credit :

ಮುಂಡಗೋಡ: ಕಳೆದ ಮೂರು ತಿಂಗಳ ಹಿಂದೆ ವೈನ್ ಶಾಪ್ ಕಳ್ಳತನ ಮಾಡಿ ಪರಾರಿಯಾದ ಅಂತರರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಮುಂಡಗೋಡ ಪೊಲೀಸರು ಗುರುವಾರ ಯಶಸ್ವಿಯಾಗಿದ್ದಾರೆ. ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದ ನಾಸೀರ್ ಮದ್ನಳ್ಳಿ(33) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 37 ಸಾವಿರದ 500 ರೂಪಾಯಿ ವಶಪಡಿಸಿಕೊಂಡಿದ್ದಾರೆ.

ಆ.19ರ ನಸುಕಿನ ವೇಳೆ ಪಟ್ಟಣದ ತೃಪ್ತಿ ವೈನ್‌ಶಾಪ್‌ನ ಮೇಲಿನ ಶೀಟ್ ತೆಗೆದು ಕೆಳಗೆ ಇದ್ದ ಹಾಸುಗಲ್ಲು ಒಡೆದು ಒಳಗೆ ನುಗ್ಗಿ ಪ್ಲಾಸ್ಟಿಕ್ ಡಬ್ಬದಲ್ಲಿ ವ್ಯಾಪಾರ ಮಾಡಿ ಇಟ್ಟಿದ್ದ 1,93,500ರೂ. ಹಣವನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೇಲಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಪಿಐ ಎಸ್.ಎಸ್.ಸಿಮಾನಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಖಚಿತ ಮಾಹಿತಿ ಮೇರೆಗೆ ಆರೋಪಿ ಪತ್ತೆ ಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವೈನ್‌ಶಾಪ್ ಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದಾನೆ. ಇದನ್ನು ಹೊರತುಪಡಿಸಿ ಬ್ಯಾಡಗಿ, ಗದಗ, ಕೊಪ್ಪಳ, ಅಣ್ಣಿಗೇರಿ, ಕೊಣ್ಣೂರು, ಕೆರೂರು, ಲೋಕಾಪುರ, ಜಮಖಂಡಿ, ಅಂಕಲಿ, ಯರಗಟ್ಟಿ, ಘಟಪ್ರಭಾ, ಹುಬ್ಬಳ್ಳಿ, ಸವದತ್ತಿ, ಹರಪನಹಳ್ಳಿ, ಹಿರೇಕೇರೂರ, ಸಾಗರ, ಯಾದಗಿರಿ ಕಡೆಗಳಲ್ಲಿ ಈತನು ಬಾರ್‌ಗಳ ಕಳ್ಳತನ ಮಾಡಿದ ಬಗ್ಗೆ ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಆರೋಪಿಯಿಂದ ಪ್ರಕರಣಕ್ಕೆ ಸಂಬoಧಪಟ್ಟoತೆ ಒಟ್ಟು 37,500ರೂ. ಹಣ ಜಪ್ತಿ ಮಾಡಲಾಗಿದೆ ಎಂದು ಸಿಪಿಐ ಸಿದ್ದಪ್ಪ ಸಿಮಾನಿ ತಿಳಿಸಿದ್ದಾರೆ.

ಕಾರ್ಯಚರಣೆಯಲ್ಲಿದ್ದ ಸಿಪಿಐ ಸಿದ್ದಪ್ಪ ಸಿಮಾನಿ, ಪಿಎಸ್‌ಐ ಬಸವರಾಜ ಮಬನೂರ, ನಿಂಗಪ್ಪ ಜಕ್ಕಣ್ಣವರ, ಸಿಬ್ಬಂದಿ ಗಣಪತಿ ಹುನ್ನಳ್ಳಿ, ಅನ್ವರ್‌ಖಾನ್, ವಿನೋದಕುಮಾರ, ಅರುಣಕುಮಾರ ಬಾಗೇವಾಡಿ, ಶರತ ದೇವಳ, ತಿರುಪತಿ ಚೌಡಣ್ಣನವರ, ಮಹೇಶ ಹತ್ತಳ್ಳಿ ಹಾಗೂ ಯಲ್ಲಾಪುರ ಪೊಲೀಸ್ ಠಾಣೆಯ ಮಹಮ್ಮದ್ ಶಫಿ ಇವರಿಗೆ ಪೊಲೀಸ್ ಅಧೀಕ್ಷಕರು ಅಭಿನಂದಿಸಿ ಬಹುಮಾನ ಘೋಷಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು