News Karnataka Kannada
Sunday, April 28 2024
ಉತ್ತರಕನ್ನಡ

ಶುಕ್ರವಾರ ಉತ್ತರ ಕನ್ನಡ ಜಿಲ್ಲೆಗೆ ಸಿಎಂ ; ಪ್ರವಾಹ ಪರಿಸ್ಥಿತಿ ಅವಲೋಕನ

Basavaraja Bommai
Photo Credit :

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೂಡಲೇ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿರುವ ಸಿಎಂ ಬಸವರಾಜ ಬೊಮ್ಮಾಯಿ ಇದರ ಬೆನ್ನಲ್ಲೇ ಭೀಕರ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಿಗೆ ನಾಳೆಯಿಂದಲೇ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ನಾಳೆ ಸಿಎಂ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಈ ಬಾರಿ ಕರಾವಳಿ ಮತ್ತು ಮಲೆನಾಡಿನಲ್ಲಿ ಸುರಿದ ಭಾರೀ ಮಳೆಯಿಂದ ಉತ್ತರ ಕನ್ನಡ ಜಿಲ್ಲೆ ಬಹುತೇಕ ಮುಳುಗಡೆಯಾಗಿತ್ತು. ಅಂಕೋಲ, ಕಾರವಾರ, ಶಿರಸಿ, ಹೊನ್ನಾವರ, ಯಲ್ಲಾಪುರ, ದಾಂಡೇಲಿ, ಕುಮಟಾ ಸೇರಿದಂತೆ ಹಲವೆಡೆ ಭಾರೀ ಆಸ್ತಿಪಾಸ್ತಿ ಹಾನಿಯಾಗಿವೆ. ಈ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಕನ್ನಡ ಜಿಲ್ಲೆಯ ಕಾರವಾರಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.
ಇದೇ ವೇಳೆ, ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳುವ ವಿಚಾರವಾಗಿಯೂ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ಕೇಳಿದ್ದೇನೆ. ಅವರು ಸಮಯ ಕೊಟ್ಟರೆ ಪ್ರಧಾನಿ ಮೋದಿ ಭೇಟಿಗೆ ಹೋಗುತ್ತೇನೆ. ನನ್ನ ಮೊದಲ ದೆಹಲಿ ಭೇಟಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಜೆ.ಪಿ. ನಡ್ಡಾರನ್ನು ಭೇಟಿಯಾಗುವುದು. ದೆಹಲಿಗೆ ಹೋಗಿ ನಮ್ಮ ಕೇಂದ್ರದ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ವಿಧಾನಸೌಧದಲ್ಲಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು