News Karnataka Kannada
Sunday, April 28 2024
ಉತ್ತರಕನ್ನಡ

ಪೊಲೀಸ್ ಠಾಣೆಯಲ್ಲಿ ಆರೋಪಿ ಆತ್ಮಹತ್ಯೆ ಪ್ರಕರಣ: ಪಿಐ, ಪಿಎಸ್ಐ ಸೇರಿ ಐವರು ಸಸ್ಪೆಂಡ್

5 suspended, including PI, PSI, suspended in police station for suicide case
Photo Credit : By Author

ಕಾರವಾರ: ಕಳ್ಳತನದ ಆರೋಪದ ಮೇಲೆ ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾವರ ಠಾಣೆಯ ಪಿಐ, ಪಿಎಸ್ಐ ಸೇರಿ ಐವರು ಅಮಾನತುಗೊಂಡಿದ್ದಾರೆ.

ಮೃತ ಆರೋಪಿ ಬಿಹಾರ ಮೂಲದ ವ್ಯಕ್ತಿಯಾಗಿದ್ದು, ಪಾಲೀಷ್ ಮಾಡುವ ನೆಪದಲ್ಲಿ ಚಿನ್ನ ಕದಿಯುತ್ತಿದ್ದ ಆರೋಪದ ಮೇಲೆ ಬಿಹಾರ ಮ಼ೂಲದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಆದರೆ ದಿಲೀಪ ಮಂಡಲ್ ಎಂಬಾತ ನಿನ್ನೆ ವಿಷ ಸೇವಿಸಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.

ಈ ಪ್ರಕರಣದಲ್ಲಿ ಬಿಹಾರ ಮೂಲದ ಇಬ್ಬರನ್ನು ವಶಕ್ಕೆ ಪಡೆದಿದ್ದ ಪೊಲೀಸರು ನಿನ್ನೆ, ಶನಿವಾರ ವಿಚಾರಣೆಗಾಗಿ ಹೊನ್ನಾವರ ಠಾಣೆಗೆ ಕರೆತಂದಿದ್ದರು. ಈ ವೇಳೆ ಆರೋಪಿ ಬಾಯಾರಿಕೆಯೆಂದು ನೀರು ಕುಡಿಯಲು ಹೋಗಿದ್ದ ವೇಳೆ ನೀರಿನೊಂದಿಗೆ ಬೆರೆಸಿ ವಿಷ ಸೇವನೆ ಮಾಡಿದ್ದಾನೆ.

ಕೃತ್ಯ ಗಮನಕ್ಕೆ ಬರುತ್ತಿದ್ದಂತೆ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಆರೋಪಿ ಮೃತಪಟ್ಟಿದ್ದ. ಪೊಲೀಸ್ ಠಾಣೆಯಲ್ಲಿ ವಿಷ ಸೇವಿಸಿ ಮೃತಪಟ್ಟ ಹಿನ್ನೆಲೆಯಲ್ಲಿ ಎಸ್ಪಿ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಹೊನ್ನಾವರ ಠಾಣೆಗೆ ಭೇಟಿ ನೀಡಿದ್ದರು. ಈಗ ಈ ಪ್ರಕರಣದಲ್ಲಿ ಹೊನ್ನಾವರ ಠಾಣೆಯ ಪಿ.ಐ ಮಂಜುನಾಥ, ಠಾಣೆಯ ಕ್ರೈಂ ಪಿ.ಎಸ್.ಐ ಮಂಜೇಶ್ವರ ಚಂದಾವರ, ಪೊಲೀಸ್ ಸಿಬ್ಬಂದಿ ಮಹಾವೀರ, ರಮೇಶ, ಸಂತೋಷ ಅವರನ್ನು ಅಮಾನತುಗೊಳಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು