ಕಾರವಾರ: ಅಮೃತ ಮಹೋತ್ಸವದ ಅಂಗವಾಗಿ ಬೈಕ್ ಕೋಸ್ಟ್ ಗಾರ್ಡ್ ನಿಂದ ಬೈಕ್ ರ‍್ಯಾಲಿ

ಕಾರವಾರ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಭಾರತೀಯ ಕೋಸ್ಟ್ ಗಾರ್ಡ್ ವತಿಯಿಂದ ಆಯೋಜಿಸಲಾಗಿರುವ ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬುಧವಾರ ಬೆಳಿಗ್ಗೆ ಚಾಲನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಭಾರತೀಯ ಕೋಸ್ಟ್ ಗಾರ್ಡ್ ಅಧಿಕಾರಿ ಹಾಗೂ ಸಿಬ್ಬಂಸಿಗಳೊಂದಿಗೆ ನೌಕಾಪಡೆಯ ಎನ್.ಸಿ.ಸಿ. ಕೆಡೆಟ್‌ಗಳು ಹಾಗೂ ಭೂ ಸೇನಾ ಎನ್.ಸಿ.ಸಿ. ಕೆಡೆಟ್‌ಗಳು ಸೇರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮಾತನಾಡಿ ದೇಶ ಸೇವೆಯಲ್ಲಿ ಅನೇಕ ಅಧಿಕಾರಿಗಳು ತೊಡಗಿಕೊಂಡಿದ್ದಾರೆ. ಇಂಥ ಕಾರ್ಯಕ್ರಮದಲ್ಲಿ ಎನ್.ಸಿ.ಸಿ. ಕೆಡೆಟ್‌ಗಳು ಪಾಲ್ಗೊಳ್ಳಬೇಕು.

ಹೆಚ್ಚಿನ ವಿದ್ಯಾರ್ಥಿಗಳು ಎನ್.ಸಿ.ಸಿ. ಯಲ್ಲಿ ತೊಡಗಿಕೊಳ್ಳಬೇಕು. ವಿದ್ಯಾರ್ಥಿಗಳು ಸಮಾಜಕ್ಕೆ ಏನಾದರೂ ನೀಡಬೇಕು ಎನ್ನುವ ಚಿಂತನೆ ಮೈಗೂಡಿಸಿಕೊಳ್ಳಬೇಕು. ಇದೊಂದು ಅವಕಾಶವಾಗಿದ್ದು ಇಲ್ಲಿಂದ ಮುಂದೆ ಹೆಚ್ಚಿನದನ್ನು ಕಲಿಯಬಹುದು. ದೇಶ ಪ್ರೇಮ ಎನ್ನುವುದು ಜವಾಬ್ದಾರಿಯುತ ಚಿಂತನೆಯಾಗಿದ್ದು ಸಣ್ಣ ಚಿಂತನೆಯಿಂದ ದೇಶವನ್ನು ಅಭಿವೃದ್ಧಿಯತ್ತ ಒಯ್ಯಬಹುದು ಎಂದರು.

ಸ್ಟೇಷನ್ ಕಮಾಂಡರ್ ಸುರೇಶ ಕಪೂರ ಸೇರಿದಂತೆ ಹಲವಾರು ಅಧಿಕಾರಿಗಳು ಇದ್ದರು. ರ‍್ಯಾಲಿಯು ಕಾರವಾರದಿಂದ ಅಂಕೋಲಾಗೆ ತೆರಳಲಿದ್ದು ಅಲ್ಲಿನ ಸೂರ್ವೆಗೆ ತೆರಳಿ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನಿಸಲಾಗುವುದು. ಬಳಿಕ ಎಸ್,ಪಿ. ಕಚೇರಿಗೆ ಮರಳಿ ರ‍್ಯಾಲಿ ಕೊನೆಗೊಳ್ಲಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Sneha Gowda

Recent Posts

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

6 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

17 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

21 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

36 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

51 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

59 mins ago