News Karnataka Kannada
Monday, April 29 2024
ಉತ್ತರಕನ್ನಡ

ಬಿಜೆಪಿಯವರು ಎಲ್ಲವನ್ನೂ ದಿವಾಳಿ ಮಾಡಿಟ್ಟಿದ್ದಾರೆ: ಸಚಿವ ಮಂಕಾಳು ವೈದ್ಯ

BJP has bankrupted everything: Minister Mankalu Vaidya
Photo Credit : News Kannada

ಕಾರವಾರ: ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಇಲಾಖೆ ಬಳಿ ಹಣವಿಲ್ಲ. ಈಗ ಅದನ್ನು ಕಾಂಗ್ರೆಸ್ ಸರಿ ಮಾಡಬೇಕಿದೆ ಎಂದು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಮಂಕಾಳ ವೈದ್ಯ ಟೀಕಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು ನಾನು ಮಾತನಾಡಿದರೆ ರಾಜಕೀಯವಾಗುತ್ತದೆ ಯಾವ ಇಲಾಖೆಯಲ್ಲಿ ಹಣವಿಲ್ಲ. ಬಿಜೆಪಿ ಸರಕಾರ ಶೇ.40 ದೋಚಿಕೊಂಡು ಹೋಗಿದ್ದಾರೆ. ಹೀಗಾಗಿ ಯಾವ ಇಲಾಖೆಯಲ್ಲಿ ಹಣ ಇಟ್ಟಿಲ್ಲ. ಬಿಜೆಪಿಯವರು ಎಲ್ಲವನ್ನೂ ದಿವಾಳಿ ಮಾಡಿಟ್ಟಿದ್ದಾರೆ. ಎಲ್ಲವನ್ನೂ ನಾವು ಮರುಸ್ಥಾಪನೆ ಮಾಡಬೇಕಾಗಿದೆ ಎಂದರು. ಹಿಂದಿನ ಸರಕಾರ ವಿದ್ಯುತ್ ದರ ಏರಿಕೆ ಮಾಡಿತ್ತು. ಜನವರಿಯಲ್ಲಿ ಆದೇಶ ಮಾಡಿದ್ದು ಫೆಬ್ರುವರಿಯಲ್ಲಿ ಜಾರಿಗೆ ಬಂದಿತ್ತು. ಆದರೆ, ಚುನಾವಣೆ ಮುಗಿಯಲಿ ಎನ್ನುವ ಕಾರಣಕ್ಕೆ ಆದೇಶ ಜಾರಿಯಾಗಿರಲಿಲ್ಲ. ಚುನಾವಣೆ ಮುಗಿದಿದ್ದು, ಈ ಬಾರಿ ವಿದ್ಯುತ್ ಬಿಲ್ ಹೆಚ್ಚಳ ಬಂದಿದೆ. ಬಿಜೆಪಿ ಸರಕಾರ ಏನು ಮಾಡಿದೆ ಎನ್ನುವುದರ ಬಗ್ಗೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು