News Karnataka Kannada
Sunday, April 28 2024
ಉತ್ತರಕನ್ನಡ

ಬೈಂದೂರು: ಚಾಕೊಲೇಟ್​ ಗಂಟಲಲ್ಲಿ ಸಿಲುಕಿ ಶಾಲಾ ಬಾಲಕಿ ಸಾವು

24 people, including 12 infants, die in 24 hours at govt hospital
Photo Credit : Wikimedia

ಬೈಂದೂರು: ಶಾಲೆಗೆ ಹೊರಟಿದ್ದ ಬಾಲಕಿ ಮನೆಯವರು ನೀಡಿದ ಚಾಕೊಲೇಟ್​ ಅನ್ನು ಬಾಯಿಗೆ ಹಾಕಿಕೊಂಡು ಶಾಲಾ ಬಸ್ ಬಂತೆಂದು ಬಸ್ ಬಳಿಗೆ ಓಡುವಾಗ ಚಾಕೊಲೇಟ್​ ನುಂಗಿದ ಪರಿಣಾಮ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಕಬ್ಸೆಯ ನಿವಾಸಿ ಸುಪ್ರೀತಾ ಪೂಜಾರಿ ಎಂಬುವರ ಮಗಳು ಸಮನ್ವಿ (6) ಎಂಬ ಮೃತಪಟ್ಟ ಬಾಲಕಿ.

ಸಮನ್ವಿ ಬುಧವಾರ ಬೆಳಗ್ಗೆ ಎಂದಿನಂತೆಯೇ ಶಾಲೆಗೆ ಹೊರಡಲು ಸಮವಸ್ತ್ರ ಧರಿಸಿ ಸಿದ್ಧವಾಗಿದ್ದರು. ಆದರೆ, ಅದೇಕೋ ಆಕೆಯ ಮನಸ್ಸು ಶಾಲೆಗೆ ಹೋಗಲು ಒಪ್ಪಿರಲಿಲ್ಲ. ಇದರಿಂದ ಮನೆಯವರು ಆಕೆಗೆ ಕೈಯಲ್ಲೊಂದು ಚಾಕೊಲೇಟ್​​ ನೀಡಿ ಪುಸಲಾಯಿಸಿ ಶಾಲೆಗೆ ಹೊರಡಿಸಿದ್ದರು. ಅಷ್ಟೊತ್ತಿಗಾಗಲೇ ಶಾಲಾ ವಾಹನ ಬಂದಿದೆ. ಇದರಿಂದ ಗಾಬರಿಗೊಂಡ ಬಾಲಕಿ ಸಮನ್ವಿ ಕೈಯಲ್ಲಿದ್ದ ಚಾಕೊಲೇಟ್​ ಪ್ಲಾಸ್ಟಿಕ್ ಕವರ್ ಸಮೇತ ಬಾಯಿಗೆ ಹಾಕಿಕೊಂಡು ವಾಹನದತ್ತ ಓಡಿದ್ದಾಳೆ. ಹೀಗೆ ಓಡುವಾಗ ಚಾಕೊಲೇಟ್​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಗಂಟಲಲ್ಲಿ ಚಾಕೊಲೇಟ್​ ಕವರ್ ಸಮೇತ ಸಿಕ್ಕಿಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಶಾಲಾ ವಾಹನದ ಮೆಟ್ಟಿಲ ಬಳಿಯೇ ಕುಸಿದು ಬಿದ್ದಿದ್ದಾರೆ. ಮನೆಯವರು ಶಾಲಾ ವಿದ್ಯಾರ್ಥಿಗಳು, ಸ್ಕೂಲ್ ವ್ಯಾನ್ ಡ್ರೈವರ್ ಎಲ್ಲರೂ ಮಗುವಿಗೆ ಕೃತಕ ಉಸಿರಾಟ ನೀಡಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ. ಕೂಡಲೇ ಬಾಲಕಿಯನ್ನು ಬೈಂದೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು