ಬೈಂದೂರು: ಚಾಕೊಲೇಟ್​ ಗಂಟಲಲ್ಲಿ ಸಿಲುಕಿ ಶಾಲಾ ಬಾಲಕಿ ಸಾವು

ಬೈಂದೂರು: ಶಾಲೆಗೆ ಹೊರಟಿದ್ದ ಬಾಲಕಿ ಮನೆಯವರು ನೀಡಿದ ಚಾಕೊಲೇಟ್​ ಅನ್ನು ಬಾಯಿಗೆ ಹಾಕಿಕೊಂಡು ಶಾಲಾ ಬಸ್ ಬಂತೆಂದು ಬಸ್ ಬಳಿಗೆ ಓಡುವಾಗ ಚಾಕೊಲೇಟ್​ ನುಂಗಿದ ಪರಿಣಾಮ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಕಬ್ಸೆಯ ನಿವಾಸಿ ಸುಪ್ರೀತಾ ಪೂಜಾರಿ ಎಂಬುವರ ಮಗಳು ಸಮನ್ವಿ (6) ಎಂಬ ಮೃತಪಟ್ಟ ಬಾಲಕಿ.

ಸಮನ್ವಿ ಬುಧವಾರ ಬೆಳಗ್ಗೆ ಎಂದಿನಂತೆಯೇ ಶಾಲೆಗೆ ಹೊರಡಲು ಸಮವಸ್ತ್ರ ಧರಿಸಿ ಸಿದ್ಧವಾಗಿದ್ದರು. ಆದರೆ, ಅದೇಕೋ ಆಕೆಯ ಮನಸ್ಸು ಶಾಲೆಗೆ ಹೋಗಲು ಒಪ್ಪಿರಲಿಲ್ಲ. ಇದರಿಂದ ಮನೆಯವರು ಆಕೆಗೆ ಕೈಯಲ್ಲೊಂದು ಚಾಕೊಲೇಟ್​​ ನೀಡಿ ಪುಸಲಾಯಿಸಿ ಶಾಲೆಗೆ ಹೊರಡಿಸಿದ್ದರು. ಅಷ್ಟೊತ್ತಿಗಾಗಲೇ ಶಾಲಾ ವಾಹನ ಬಂದಿದೆ. ಇದರಿಂದ ಗಾಬರಿಗೊಂಡ ಬಾಲಕಿ ಸಮನ್ವಿ ಕೈಯಲ್ಲಿದ್ದ ಚಾಕೊಲೇಟ್​ ಪ್ಲಾಸ್ಟಿಕ್ ಕವರ್ ಸಮೇತ ಬಾಯಿಗೆ ಹಾಕಿಕೊಂಡು ವಾಹನದತ್ತ ಓಡಿದ್ದಾಳೆ. ಹೀಗೆ ಓಡುವಾಗ ಚಾಕೊಲೇಟ್​ ಗಂಟಲಲ್ಲಿ ಸಿಕ್ಕಿಕೊಂಡಿದೆ. ಗಂಟಲಲ್ಲಿ ಚಾಕೊಲೇಟ್​ ಕವರ್ ಸಮೇತ ಸಿಕ್ಕಿಹಾಕಿಕೊಂಡ ಪರಿಣಾಮ ಉಸಿರುಗಟ್ಟಿ ಶಾಲಾ ವಾಹನದ ಮೆಟ್ಟಿಲ ಬಳಿಯೇ ಕುಸಿದು ಬಿದ್ದಿದ್ದಾರೆ. ಮನೆಯವರು ಶಾಲಾ ವಿದ್ಯಾರ್ಥಿಗಳು, ಸ್ಕೂಲ್ ವ್ಯಾನ್ ಡ್ರೈವರ್ ಎಲ್ಲರೂ ಮಗುವಿಗೆ ಕೃತಕ ಉಸಿರಾಟ ನೀಡಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ. ಕೂಡಲೇ ಬಾಲಕಿಯನ್ನು ಬೈಂದೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

1 hour ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

1 hour ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

2 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

2 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

2 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

3 hours ago