News Karnataka Kannada
Monday, April 29 2024
ಉತ್ತರಕನ್ನಡ

ಆಟವಾಡುತ್ತಿದ್ದ ಮಗು ನೀರಿಗೆ ಬಿದ್ದು ಸಾವು

New Project 2023 12 23t175029.866
Photo Credit : News Kannada

ಮುಂಡಗೋಡ: ಮುಂಡಗೋಡ ತಾಲೂಕಿನಲ್ಲಿ ಘೋರ ದುರಂತವೊಂದು ನಡೆದುಹೋಗಿದೆ. ಆಟವಾಡುತ್ತಾ ಇಟ್ಟಿಗೆ ತಯಾರಿಕೆಗೆ ಶೇಖರಿಸಿಟ್ಟಿದ್ದ ನೀರಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಲಕ್ಕೊಳ್ಳಿ ಗ್ರಾಮದಲ್ಲಿ ನಡೆದಿದೆ. ಇಂದೂರಿನ ಮಾನ್ವಿತ ಮಲ್ಲಿಕಾರ್ಜುನ ಹೊಸೂರ(3) ಮೃತ ಮಗು, ಮಗುವಿನ ತಾಯಿ ಮಾನ್ವಿತಳನ್ನು ತನ್ನ ಜೊತೆಗೆ ಇಟ್ಟಿಗೆ ಕೆಲಸಕ್ಕೆ ಕರೆತಂದಿದ್ದಳು. ತಾಯಿ ತನ್ನ ಕೆಲಸದಲ್ಲಿ ನಿರತಳಾಗಿದ್ದಾಗ ಮಗು ಮಾನ್ವಿತ ನೀರಿಗೆ ಬಿದ್ದು ಕೊನೆಯುಸಿರೆಳೆದಿದೆ.

ಮಗು ಬಿದ್ದಿದ್ದನ್ನು ನೋಡಿದ ತಾಯಿ ಕೂಡಲೇ ಮುಂಡಗೋಡ ತಾಲೂಕು ಆಸ್ಪತ್ರೆಗೆ ಮಗುವನ್ನು ತೆಗೆದುಕೊಂಡು ಹೋಗಿದ್ದಾರೆ. ಆದರೆ, ತಾಲೂಕು ಆಸ್ಪತ್ರೆ ವೈದ್ಯರು ನೀಡಿದ ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ಈ ಹಿನ್ನಲೆ ಬಳಿಕ ಆಸ್ಪತ್ರೆ ಸಿಬ್ಬಂದಿಗಳು ಮಗುವನ್ನು ಹುಬ್ಬಳ್ಳಿ ಕಿಮ್ಸ್​​​ಗೆ ಕಳುಹಿಸಿ ಕೊಟ್ಟಿದ್ದಾರೆ​​​. ಆದರೆ, ಹುಬ್ಬಳ್ಳಿ ಕಿಮ್ಸ್​​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು