News Karnataka Kannada
Saturday, May 04 2024
ಉತ್ತರಕನ್ನಡ

ಕಾರವಾರ-ಇಳಕಲ್ ಹೆದ್ದಾರಿಯಲ್ಲಿ ಉತ್ತಮ ರಸ್ತೆ ನಿರ್ಮಾಣಕ್ಕೆ ಒತ್ತಾಯ

Demand for better road construction on Karwar-Ilakkal highway
Photo Credit : By Author

ಕಾರವಾರ: ಕಾರವಾರ-ಇಳಕಲ್ ರಾಜ್ಯ ಹೆದ್ದಾರಿಯಲ್ಲಿನ ಒತ್ತುವರಿ ತೆರವು ಮಾಡಿ ಉತ್ತಮ ರಸ್ತೆ ನಿರ್ಮಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರಿಗೆ ಶನಿವಾರ ಮನವಿ ಸಲ್ಲಿಸಿ ಒತ್ತಾಯಿಸಿದರು.

ಕಾರವಾರ ಇಳಕಲ್ ರಾಜ್ಯ ಹೆದ್ದಾರಿ ಅಗಲೀಕರಣ ಕಾರ್ಯ ಪ್ರಾರಂಭವಾಗಿದೆ. ಪ್ರತಿದಿನ ಸಾಕಷ್ಟು ವಾಹನಗಳು ಓಡಾಡುವ ಕಾರಣ ರಸ್ತೆ ಮಧ್ಯಭಾಗದಿಂದ ಡಿವೈಡರ್ ಅಳವಡಿಸಿ ವಿದ್ಯುತ್ ಕಂಬ ಅಳವಡಿಸಲಾಗುತ್ತಿರುವುದು ಒಳ್ಳೆಯ ಬೆಳವಣಿಗೆ. ಆದರೆ ರಸ್ತೆ ಅಭಿವೃದ್ಧಿಗೆ ಒತ್ತುವರಿ ಮಾಡಿಕೊಂಡಿದ್ದ ಪ್ರದೇಶದಲ್ಲಿ ಕೂಡಲೇ ತೆರವುಗೊಳಿಸಬೇಕು ಎಂದು ಆಗ್ರಹಿಸಿದರು.

ಇನ್ನು ಕೆಲವರು ರಸ್ತೆ ಮೇಲೆ ಸಂಚರಿಸುವ ಎರಡು ಭಾಗದಲ್ಲಿ ಪ್ರತಿ ದಿನ ದೊಡ್ಡ ವಾಹನವನ್ನು ವರ್ಷವಿಡಿ ಇಡುವುದರಿಂದ ಪ್ರಯಾಣಿಕರಿಗೆ ಬಹಳ ತೊಂದರೆಯಾಗುತ್ತಿದೆ. ಇಂತಹ ವಾಹನ ನಿಲ್ಲಿಸುವ ಮಾಲಿಕರಿಗೂ ಹಾಗೂ ವಾಹನದ ಮೇಲೆ ಕ್ರಮ ಕೈಗೊಳ್ಳಬೇಕು. ಮಳೆ ನೀರಿನಿಂದ ರಸ್ತೆ ಜಲಾವೃತವಾಗಿ ಸಾರ್ವಜನಿಕರು ಶಾಲಾ ಮಕ್ಕಳು ಆಟೋ ಚಾಲಕರು ಪರದಾಡುವುದನ್ನ ತಪ್ಪಿಸಬೇಕು. ಹೆದ್ದಾರಿಯೂ ಕಿರಿದಾಗಿರುವ ಕಾರಣ ಕೈಗಾದಿಂದ ಸಂಚರಿಸುವ ದೊಡ್ಡ ವಾಹನವನ್ನು ಮಲ್ಲಾಪುರದಿಂದ ಸದಾಶಿವಗಡ ರಸ್ತೆ ಮುಖಾಂತರ ಸಂಚರಿಸಲು ಸೂಚಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಜಿಲ್ಲಾಧ್ಯಕ್ಷ ದಿಲೀಪ್ ಜಿ ಅರ್ಗೇಕರ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೋಷನ್ ಹರಿಕಂತ್ರ ಜಿಲ್ಲಾ ಸಂಚಾಲಕ ಗೋಪಾಲ್ ಗೌಡ. ಜಿಲ್ಲಾ ಕಾರ್ಯದರ್ಶಿ ರಾಜೇಶ್ ಹರಿಕಂತ್ರ, ಮೋಹನ್ ಉಳ್ವೇಕರ್, ಸುದೇಶ್ ನಾಯ್ಕ್. ಸುಶಾಂತ್ ಹರಿಕಾಂತ್, ರಮಕಾಂತ್ ನಾಯ್ಕ್. ಸೂರಜ್ ಉಮೇಶ್ ನಾಯ್ಕ್, ಸದಾನಂದ ಇನ್ನಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು