ಮುಂಡಗೋಡ: ಡಯಾಲಿಸಿಸ್ ಸಿಬ್ಬಂದಿಗಳ ಮುಷ್ಕರದಿಂದಾಗಿ ಸರಿಯಾಗಿ ಚಿಕಿತ್ಸೆ ಸಿಗದೆ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ ರೋಗಿಯೊಬ್ಬ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಮಮ್ಮದಗೌಸ್ ಅಬ್ದುಲವಹಾಬ್ ಸೈಯದ್ (೫೮) ಚಿಕಿತ್ಸೆ ಸಿಗದೆ ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಕಿಡ್ನಿ ಸಮಸ್ಯೆಯಿಂದಾಗಿ 2 ತಿಂಗಳಿನಿಂದ ಇವರು ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ವೇತನ ನೀಡದ ಕಾರಣಕ್ಕೆ ಡಯಾಲಿಸಿಸ್ ಸಿಬ್ಬಂದಿ ಮುಷ್ಕರ ನಡೆಸಿದ್ದರಿಂದ ಚಿಕಿತ್ಸೆ ಸಿಗದೆ ಕೊನೆಯುಸಿರೆಳೆದಿದ್ದಾರೆ.