ಕಾರವಾರ: ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಹಾಗೂ ಪಶು ಸಂಗೋಪನೆ ಇಲಾಖೆಯಡಿಯಲ್ಲಿ ನೀಡಲಾಗುತ್ತಿರುವ ವಿವಿಧ ಸಾಲ ಸೌಲಭ್ಯ ಯೋಜನೆಗಳ ಅರ್ಜಿಗಳು ಬ್ಯಾಂಕ್ಗಳಲ್ಲಿ ತಿರಸ್ಕೃತವಾಗುತ್ತಿದ್ದು, ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಅಧಿಕಾರಿಗಳು ಇಲಾಖೆಯಡಿಯಲ್ಲಿಯೇ ಸರಿಯಾಗಿ ಮಾಹಿತಿ ನೀಡಬೇಕು ಎಂದು ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ. ಸೂಚಿಸಿದರು.
ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೆನರಾ ಬ್ಯಾಂಕ್ ಜಿಲ್ಲಾ ಮಟ್ಟದ ಪರಿಶೀಲನಾ ಹಾಗೂ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪಿ.ಎಫ್.ಎಮ್.ಎಸ್ ಅಡಿಯಲ್ಲಿ ಪಾವತಿ ಮಾಡಲಾಗುತ್ತಿರುವ ಮೊತ್ತವನ್ನು ಚೆಕ್ ಮುಖಾಂತರ ಮಾಡದೆ, ಆನ್ಲೈನ್ ಪಾವತಿ ಮಾಡಬೇಕು ಎಂದು ಸೂಚನೆ ನೀಡಿದರು.
ಕೆನರಾ ಬ್ಯಾಂಕ್ಆರ್ಸೆಟಿ ತರಬೇತಿ ಸಂಸ್ಥೆಯಡಿ ಯಾವಯಾವ ತರಬೇತಿಗಳ ನೀಡಲಾಗುತ್ತಿವೇ, ಹಾಗೂ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳ ಸಂಖ್ಯೆ, ಊಟ ಮತ್ತು ವಸತಿ ವ್ಯವಸ್ಥೆ ಕುರಿತು ಸರಿಯಾದ ಮಾಹಿತಿ ತಯಾರಿಸಿ ವರದಿ ನೀಡಬೇಕು ಎಂದು ಹೇಳಿದರು.
ನರೇಗಾ ಯೋಜನೆಯಡಿಯಲ್ಲಿ ಕಾರ್ಯ ನಿರ್ವಹಿಸುತಿರುವ ಎಲ್ಲಾ ಕಾರ್ಮಿಕರ ಬ್ಯಾಂಕ್ಖಾತೆಗೆ ಆಧಾರ್ಕಾರ್ಡ್ ಜೋಡಣೆ ಮತ್ತು ಜಂಟಿ ಬ್ಯಾಂಕ್ ಖಾತೆ ಹೊಂದಿದ ಕಾರ್ಮಿಕರ ಖಾತೆಗಳನ್ನು ವೈಯಕ್ತಿಕ ಖಾತೆಗಳಾಗಿ ಮಾಡಬೇಕು ಎಂದು ನರೆಗಾ ಕಾಮಗಾರಿ ಕಾರ್ಯಕ್ರಮ ವ್ಯವಸ್ಥಾಪಕರಿಗೆ ಸೂಚಿಸಿದರು.
ಆರ್ಥಿಕ ಸಾಕ್ಷರತಾ ಕೇಂದ್ರಗಳು ಇಲಾಖೆಯಡಿಯಲ್ಲಿ ನೀಡಲಾಗುತ್ತಿರುವ ಸಾಲಸೌಲಭ್ಯದ ಕುರಿತು ಮಾಹಿತಿ ನೀಡುವುದರ ಮೂಲಕ ಜಾಗೃತಿ ಮೂಡಿಸಬೇಕು ಹಾಗೂ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ವಿದ್ಯಾಥಿಗಳಿಗೆ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಕಡ್ಡಾಯವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಆಧಾರಕಾರ್ಡ್ ಜೋಡಣೆ ಮಾಡಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಎ.ಜೆ.ಎಮ್ ಪಿ. ವಿಶ್ವಾಸ, ಕಾರವಾರ ಪ್ರಾದೇಶಿಕ ವ್ಯವಸ್ಥಾಪಕ ನಂದ ಕಿಶೋರಕಸ್ಕರ್, ಕಾರವಾರ ಪಿಡಿ.ಡಿಆರ್ಡಿಎ ಕರೀಮ್ ಅಸದಿ, ಕಾರವಾರ ಲೀಡ್ ಬ್ಯಾಂಕ್ ವ್ವಸ್ಥಾಪಕ ರುದ್ರೇಶ ಮತ್ತು ಎಲ್ಲ ಇಲಾಖೆ ಅಧಿಕಾರಿಗಳು ಇದ್ದರು.