ಉತ್ತರಕನ್ನಡ

ವಾಹನದಲ್ಲಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ಔಷಧಿ ಸಾಮಗ್ರಿ

ಕಾರವಾರ: ಚತುಷ್ಪಥ ಹೆದ್ದಾರಿಯಲ್ಲಿ ಔಷಧಿ ತುಂಬಿದ ಟಾಟಾ ಏಸ್ ವಾಹಕ್ಕೆ ಬೆಂಕಿ ತಗುಲಿ ಔಷಧಿ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ಅಂಕೋಲಾದಲ್ಲಿ ನಡೆದಿದೆ.

ಕಾರವಾರದಿಂದ ಹೊನ್ನಾವರ ಪಶು ಆಸ್ಪತ್ರೆಗೆ ಟಾಟಾ ಏಸ್ ವಾಹನದಲ್ಲಿ ಔಷಧಿ ಸಾಗಿಸಲಾಗುತ್ತಿತ್ತು. ಊಟದ ಸಮಯವಾದುದರಿಂದ ಚಾಲಕ ವಾಹನವನ್ನು ನಿಲ್ಲಿಸಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಶಾಂತಿಸಾಗರ ಹೊಟೇಲಿಗೆ ಊಟಕ್ಕೆ ತೆರಳಿದ್ದ. ಇದೇ ಸಮಯಕ್ಕೆ ಈ ವಾಹನದಲ್ಲಿ ಚಿಕ್ಕ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಇದನ್ನು ನೋಡಿದ ಚಾಲಕ ನಂದಿಸಲು ಪ್ರಯತ್ನಪಟ್ಟರೂ ಬೆಂಕಿ ಇನ್ನಷ್ಟು ಹೆಚ್ಚಾಗಿದೆ.

ಕೂಡಲೇ ಅಗ್ನಿ ಶಾಮಕ ಠಾಣೆಯವರಿಗೆ ಮಾಹಿತಿ ರವಾನಿಸಲಾಯಿತು. ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ಮತ್ತು ಸಿಬ್ಬಂದಿಗಳು ಆಗಮಿಸಿ ಬೆಂಕಿ ಆರಿಸಲು ಪ್ರಯತ್ನಿಸಿದರು. ವಾಹನಕ್ಕೆ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಔಷದಿಗೆ ಬೆಂಕಿ ತಗುಲಿ ಏಕಾಏಕಿ ಬೆಂಕಿ ಉರಿದಿದೆ. ಅಗ್ನಿ ಶಾಮಕ ಠಾಣೆಯವರ ಆಗಮನದಿಂದ ವಾಹನಕ್ಕೆ ಅಷ್ಟೇನು ದೊಡ್ಡ ಪ್ರಮಾಣದ ಹಾನಿ ಆಗುವುದು ತಪ್ಪಿದೆ.

Gayathri SG

Recent Posts

ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ  ಸಮೀಪದ  ಕಾಲೇಜಿನ ಐದನೇ ಮಹಡಿಯಿಂದ ವಿದ್ಯಾರ್ಥಿಯೊಬ್ಬ‌  ಜಿಗಿದು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ  ನಡೆದಿದೆ.

5 mins ago

ಕೊಲೆಯಾದ ಅಂಜಲಿ ಮನೆಗೆ ಶಾಸಕ ಮಹೇಶ್ ಟೆಂಗಿನಕಾಯಿ ಭೇಟಿ

ಕೊಲೆಯಾದ ಯುವತಿ ಅಂಜಲಿ ಮನೆಗೆ ಶಾಸಕ ಮಹೇಶ್ ಟೆಂಗಿನಕಾಯಿ ಭೇಟಿ ನೀಡಿದ್ದಾರೆ. ಇದೇ ವೇಳೆ ಇತ್ತೀಚೆಗೆ ಕೊಲೆಯಾದ ನೇಹಾ ಹಿರೇಮಠ…

19 mins ago

ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ: ವೆಂಕಟ್ ರಾಜಾ

ಜಿಲ್ಲೆಯಲ್ಲಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ.

53 mins ago

ಬಿಜೆಪಿ ಧರ್ಮದ ಹೆಸರಿನಲ್ಲಿ ಜನರನ್ನು ವಂಚಿಸಿ ಅಧಿಕಾರಕ್ಕೆ ಬರುವ ಪ್ಲಾನ್‌ : ಪ್ರಿಯಾಂಕಾ ಗಾಂಧಿ

ಧರ್ಮದ ಹೆಸರಿನಲ್ಲಿ ಜನರನ್ನು ವಂಚಿಸಿ ಮತ್ತೆ ಅಧಿಕಾರಕ್ಕೆ ಬರಬಹುದು ಎಂದು ಬಿಜೆಪಿ ನಾಯಕರು ನಂಬಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ…

57 mins ago

ಲೈಂಗಿಕ ದೌರ್ಜನ್ಯ ಕೇಸ್: ಪ್ರಜ್ವಲ್ ರೇವಣ್ಣ ಇಂದು ರಾತ್ರಿ ವಾಪಸ್?

ಸಂಸದ ಪ್ರಜ್ಬಲ್‌ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಳೆದ 19 ದಿನಗಳಿಂದ ವಿದೇಶಕ್ಕೆ ಪರಾರಿಯಾಗಿದ್ದು, ಇಂದು ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ…

1 hour ago

ಡ್ರಾಪ್ ನೆಪದಲ್ಲಿ ಅತ್ಯಾಚಾರ, ದೂರು ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸರು

ಡ್ರಾಪ್ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಆರೋಪಿಯನ್ನು ಬಂಧಿಸುವಲ್ಲಿ ಹಳೇಬೀಡು ಠಾಣೆ ಪೊಲೀಸರು ನಿರ್ಲಕ್ಷ್ಯವಹಿಸಿದ್ದಾರೆ ಎಂದು…

1 hour ago