ಶಿರಸಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್ಗೆ ಸಂಬಂಧಿಸಿದಂತೆ ಇದುವರೆಗೂ ಐವರ ಬಂಧನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಿಎಂ, ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಮಾಡಿದ ಕೇಸ್ನಲ್ಲಿ ಐವರನ್ನು ಬಂಧಿಸಲಾಗಿದೆ. ಆರೋಪಿಗಳು ಯಾರು ಅನ್ನೋದು ನನಗೆ ತಿಳಿದಿಲ್ಲ. ಸದ್ಯ ಬಾಂಬ್ ಸ್ಫೋಟ ಪ್ರಕರಣದಲ್ಲಿ ತನಿಖೆ ಚುರುಕುಗೊಂಡಿದೆ. ಬಾಂಬ್ ಸ್ಫೋಟಿಸುವ ಬೆದರಿಕೆ ನಮಗೆ ಬಂದಿಲ್ಲ.
ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಪಾಕಿಸ್ತಾನ್ ಜಿಂದಾಬಾದ್ ಎಂದ ಪ್ರಕರಣದಲ್ಲಿ ಆರೋಪಿಗಳನ್ನ ಬಂಧಿಸಿದ್ದೇವೆ. ಬಿಜೆಪಿ ಕಾಲದಲ್ಲಿ ಮಂಡ್ಯದಲ್ಲಿ ಅವರ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದ. ಅವರನ್ನ ಏಕೆ ಬಂದಿಸಿರಲಿಲ್ಲ. ಆ ಕೇಸ್ ಅನ್ನೇ ಬಿಜೆಪಿಗರು ಮುಚ್ಚಿ ಹಾಕಿದ್ದರು. ನಾವು ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ್ದೇವೆ ಎಂದು ಹೇಳಿದ್ದಾರೆ.