News Karnataka Kannada
Wednesday, May 08 2024
ಉತ್ತರಕನ್ನಡ

ಶಿರಸಿ: ಈಜಲು ಹೋಗಿ ಒಂದೇ ಕುಟುಂಬದ ಐವರು ನೀರುಪಾಲು

ತಾಲ್ಲೂಕಿನ ಕಣಜಿ ಗ್ರಾಮದ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಶುಕ್ರವಾರ ಕಾಲು ಜಾರಿ ಬಿದ್ದು ಇಬ್ಬರು ಸಹೋದರರು ಮೃತಪಟ್ಟಿದ್ದಾರೆ. ಮೊಹಮ್ಮದ್ ಫಾರೂಕ್ (20), ಮೊಹಮ್ಮದ್ ಆತೀಫ್ (18) ಮೃತ ಸಹೋದರರು.
Photo Credit : News Kannada

ಶಿರಸಿ: ಒಂದೇ ಕುಟುಂಬದ ಐವರು ಕುಟುಂಬಸ್ಥರ ಎದುರು ಜಲ ಸಮಾಧಿಯಾದ ಘಟನೆ ತಾಲ್ಲೂಕಿನ ಭೈರುಂಬೆ ಸಮೀಪದ ಶಾಲ್ಮಲಾ ನದಿಯ ಭೂತನಗುಂಡಿ ಪ್ರದೇಶದಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ಸಂಭವಿಸಿದೆ.

ಈ ಘಟನೆ ಇಂದು (ಡಿ. 17) ರಂದು ನಡೆದಿದ್ದು, ಶಿರಸಿ ನಗರದ ರಾಮನಬೈಲ್’ನ ಮಹಮದ್ ಸಲೀಂ (44), ಉಮರ್ ಸಿದ್ದೀಕ್ (14), ನಾಬಿಲ್ (22), ನಾದಿಯಾ ಶೇಖ್ (22) ಹಾಗೂ ಕಸ್ತೂರಬಾನಗರದ ಮಿಸಬಾ (21) ನೀರು ಪಾಲಾಗಿದ್ದಾರೆ.

ಈ ಘಟನೆ, ಕುಟುಂಬದ 20 ಜನ ಸದಸ್ಯರು ಸೇರಿ ಪಿಕ್‌ನಿಕ್‌ಗಾಗಿ ಶಾಲ್ಮಲಾ ನದಿ ಪಾತ್ರದ ಭೂತನಗುಂಡಿ ಎಂಬ ಪ್ರದೇಶಕ್ಕೆ ತೆರಳಿದ್ದ ವೇಳೆ ಸಂಭವಿಸಿದೆ. ನಾದಿಯಾ ಶೇಖ್ ಹಾಗೂ ನಾಬಿಲ್ ಎಂಬುವವರು ಆಕಸ್ಮಿಕವಾಗಿ ನೀರಲ್ಲಿ ಬಿದ್ದ ಸಂದರ್ಭದಲ್ಲಿ ಅವರನ್ನು ಉಳಿಸಲು ಸಮೀಪವಿದ್ದ ಸಲೀಂ, ಉಮರ್ ಹಾಗೂ ಮಿಸಬಾ ನೀರಿನ ಗುಂಡಿಗೆ ಧಾವಿಸಿದ್ದರು. ಯಾರಿಗೂ ಈಜು ಬರದ ಕಾರಣ ರಕ್ಷಣೆಗೆ ತೆರಳಿದವರೂ ಗುಂಡಿಯ ಆಳಕ್ಕೆ ಹೋಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸ್ಥಳಕ್ಕೆ ಡಿವೈಎಸ್ಪಿ ಗಣೇಶ ಕೆ.ಎಲ್, ಸಿಪಿಐ ಪಿ. ಸೀತಾರಾಮ, ಪಿಎಸ್‌ಐ ಪ್ರತಾಪ, ಅಗ್ನಿ ಶಾಮಕದಳದ ಸಿಬ್ಬಂದಿ, ಗೋಪಾಲ ಗೌಡ ನೇತೃತ್ವದ ಲೈಫ್ ಗಾರ್ಡ್ ತಂಡ, ಸ್ಥಳೀಯ ಈಜುಗಾರರು ಆಗಮಿಸಿ ಕಾಣೆಯಾದವರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು