News Karnataka Kannada
Sunday, May 12 2024
ಉತ್ತರಕನ್ನಡ

ಕಾರು ಅಪಘಾತ: ಗಣಪಯ್ಯ ಗೌಡ ಸೇರಿ ಮೂವರು ಗಂಭೀರ

Ganapayya Gowda, 3 others seriously injured in car accident
Photo Credit : By Author

ಕಾರವಾರ: ಕುಮಟಾ ತಾಲೂಕಿನ ಹಿರೇಗುತ್ತಿಯಲ್ಲಿ ಟ್ಯಾಂಕರ್ ಮತ್ತು ಕಾರು ಡಿಕ್ಕಿಯಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಅಂಕೋಲಾದಿಂದ ಹೊನ್ನಾವರ ಕಡೆಗೆ ಪ್ರಯಾಣಿಸುತ್ತಿರುವಾಗ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡರ ಕಾರು ಅಪಘಾತಕ್ಕೀಡಾಗಿದೆ. ಅತೀ ವೇಗವಾಗಿ ಬಂದ ಟ್ಯಾಂಕರ್, ಕಾರಿಗೆ ಡಿಕ್ಕಿ ಹೊಡೆಯಿತೆಂದು ಹೇಳಲಾಗಿದೆ. ಗಣಪಯ್ಯ ಗೌಡ, ವಿ ಎಂ ಭಂಡಾರಿ, ಪರಮೇಶ್ವರ ನಾಯ್ಕ ಗಂಭೀರ ಗಾಯಗೊಂಡಿದ್ದಾರೆ.

ಅವರನ್ನು ತಕ್ಷಣ ಸ್ಥಳೀಯರ ಸಹಕಾರದಲ್ಲಿ ಕುಮಟಾ ತಾಲೂಕು ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಕಂಗೊಂಡಿದೆ. ಈ ಅಪಘಾತದ ಬಗ್ಗೆ ಮಾಹಿತಿ ಪಡೆದ ಜೆಡಿಎಸ್ ಮುಖಂಡ ಸೂರಜ ನಾಯ್ಕ ಸೋನಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಕುಮಟಾ ತಾಲೂಕು ಆಸ್ಪತ್ರೆಗೆ ದೌಡಾಯಿಸಿ, ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.

ಸೂರಜ್ ಸೋನಿ ಅವರು ತಕ್ಷಣ ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಿರುವುದಲ್ಲದೆ ಅವರ ಜೊತೆಗೆ ತೆರಳಿ ಕಾಳಜಿ ವಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು