ಗೋಕರ್ಣ: ಜೈನಮುನಿ ಹತ್ಯೆಗೆ ರಾಘವೇಶ್ವರ ಶ್ರೀ ಖಂಡನೆ

ಗೋಕರ್ಣ: ಸಾಧು ಸಂತರ ಮೇಲೆ ದಾಳಿ ನಡೆಯುತ್ತಿರುವುದು ಖಂಡನೀಯ ಎಂದು ಶ್ರೀಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ.

ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 100 ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾಗಿರುವುದು ಆಘಾತ ತಂದಿದೆ. ಯಾವುದೇ ಧರ್ಮದ ಸಾಧು- ಸಂತರನ್ನು ಗೌರವದಿಂದ ಕಾಣುವುದು ನಮ್ಮ ಸಂಸ್ಕೃತಿ. ಅಂಥ ಸ್ಥಿತಿಯಲ್ಲಿ ಅಹಿಂಸೆಯನ್ನೇ ಬೋಧಿಸುತ್ತಾ ಬಂದ ಸಂತರ ಮೇಲೆ ದಾಳಿ ನಡೆಯುವುದು, ಹತ್ಯೆಯಂಥ ಕ್ರೂರ ಮಾರ್ಗ ಹಿಡಿಯುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಜೈನಮುನಿ ಕಾಮಕುಮಾರ ನಂದಿ ಸ್ವಾಮೀಜಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ ಧರ್ಮವನ್ನು ಕಾಪಾಡುವುದು ಮತ್ತು ಧಾರ್ಮಿಕ ಸಂಸ್ಥೆಗಳಿಗೆ, ಮುಖಂಡರಿಗೆ ಸೂಕ್ತ ರಕ್ಷಣೆ ನೀಡುವುದು ಸರ್ಕಾರದ ಹೊಣೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Ashika S

Recent Posts

ಜೀನ್ಸ್ ಪ್ಯಾಂಟ್ , ಟೀ ಶರ್ಟ್‍ಗಳಲ್ಲಿ ಅಕ್ರಮ ಚಿನ್ನ ಸಾಗಾಟ: ನಾಲ್ವರು ವಶಕ್ಕೆ

ಕಸ್ಟಮ್ಸ್ ಅಧಿಕಾರಿಗಳು 1.96 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

2 mins ago

ಆರ್‌ಸಿಬಿ vs ಸಿಎಸ್ಕೆ: ಚಾಲೆಂಜ್ ಹಾಕಿ ಖಾಕಿ ಅತಿಥಿಯಾದ ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್

ಶನಿವಾರ ನಡೆದ ಹೈವೋಲ್ಟೇಜ್ ಆರ್‌ಸಿಬಿ ವರ್ಸಸ್ ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಅತಿಕ್ರಮ ಪ್ರವೇಶ ಮಾಡುವುದಾಗಿ ವಿಡಿಯೋ ಪೋಸ್ಟ್…

15 mins ago

ಶೂ ವ್ಯಾಪಾರಿ ಮನೆಯಿಂದ 40 ಕೋಟಿ ರೂ. ನಗದು ವಶಕ್ಕೆ

ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್‌ ಡಂಗ್‌…

19 mins ago

ಐಪಿಎಲ್‌ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡು ನೇಣಿಗೆ ಶರಣು

ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ…

43 mins ago

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

54 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

1 hour ago