ಹೊನ್ನಾವರ: ಪಟ್ಟಣದ ಗೇರುಸೊಪ್ಪಾ ವೃತ್ತದ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಕೆಲ ಕಾಲ ಆತಂಕ ಸೃಷ್ಡಿಯಾದ ಘಟನೆ ನಡೆದಿದೆ.
ಮಂಗಳೂರಿನಿಂದ ಹುಬ್ಬಳ್ಳಿಗೆ ಸಂಚರಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಅನಿಲ ಸೋರಿಕೆಯಾಗದಂತೆ ವಹಿಸಬೆಕಾದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದು, ಹೆದ್ದಾರಿಯಲ್ಲಿ ಬ್ಯಾರಿಕೇಟ್ ಇಡಲಾಗಿದೆ. ಭಟ್ಕಳ ಮಾರ್ಗದಿಂದ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿದ್ದು, ಕಾರು ಮತ್ತು ಬೈಕ್ ಪ್ರವಾಸಿ ವಾಹನವನ್ನು ಹೊನ್ನಾವರ ಪಟ್ಟಣದ ಒಳಭಾಗದ ಮಾರ್ಗವಾಗಿ ಕುಮಟಾ ಕಾರವಾರ ಶಿರಸಿಗೆ ತೆರಳುತ್ತಿದ್ದಾರೆ.