ಕಾರವಾರ: ಮಾಜಿ ಎನ್ನುವ ಶಾಪದಿಂದ ವಿಮುಕ್ತನಾಗಿದ್ದೇನೆ ಎಂದು ಶಾಸಕ ಸತೀಶ್ ಸೈಲ್ ತಿಳಿಸಿದರು. ನಗರದ ಕುಂಠಿಮಹಮ್ಮಾಯಿ ದೇವಸ್ಥಾನದ ಸಮೀಪ ಬುಧವಾರ ನಡೆದ ಬಝಾರ್ ಶಾಲೆಯ ಶತಮಾನೋತ್ಸವ ಪ್ರಾರಂಭ ಮತ್ತು ಕಲಿಕಾ ಕಾರ್ಯಕ್ರಮ ಉದ್ಘಾಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೆಸರು ಪ್ರಸ್ತಾಪಿಸದ ಮಾಜಿ ಶಾಸಕರು ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದರು.
ಕಳೆದ ವರ್ಷಗಳಿಗೆ ಹೊಲಿಸಿದರೆ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಕಂಡಿದೆ. ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ತಿಳಿಸಿದರು.
ಶಾಲೆಗೆ ಯಾವುದೇ ನೆರವು ಬೇಕಿದ್ದಲ್ಲಿ ನೇರವಾಗಿ ನನ್ನನ್ನು ಸಂಪರ್ಕಿಸಿ ಎಂದು ಅವರು ತಿಳಿಸಿದರು.
ಶಾಸಕರಾಗಿ ಆಯ್ಕೆಯಾದ ನಂತರದಲ್ಲಿ ಶಾಸಕ ಸತೀಶ್ ಸೈಲ್ ಅವರು ಇದೇ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಕಾರವಾರ-ಅಂಕೋಲಾ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದು ಶಾಸಕರು ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತೇಶ ನಾಯಕ, ನಗರಸಭೆ ಸದಸ್ಯ ಪ್ರದೀಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಉದ್ಯಮಿ ಸಮೀರ ನಾಯಕ, ರಾಘು ನಾಯ್ಕ, ಜಿಲ್ಲಾ ಸೈನಿಕ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಾನಂದ ಮತ್ತಿತರರು ಇದ್ದರು.