ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಭಗತ್ ಸಿಂಗ್ ನಗರದಲ್ಲಿ ಜ. 6ರಂದು ಕಾರ್ಮಿಕರಿಂದ ಮಲಗುಂಡಿ ಸ್ವಚ್ಛಗೊಳಿಸಿರುವಂತಹ ಅಮಾನವೀಯ ಘಟನೆ ಒಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗುತ್ತಿಗೆದಾರ ಬೈಂದೂರಗೆ ಸಂಬಂಧಿಸಿದ ಹಳೆಯ ಕಟ್ಟಡದ ಶೌಚಗುಂಡಿ ಸ್ವಚ್ಛಗೊಳಿಸಲು ಇಬ್ಬರು ಕಾರ್ಮಿಕರ ಬಳಕೆ ಮಾಡಲಾಗಿದೆ.
ಮಲ ತುಂಬಿದ್ದ ಬುಟ್ಟಿ ತಲೆ ಮೇಲೆ ಹೊತ್ತೊಯ್ದ ಕಾರ್ಮಿಕರು ಗೂಡ್ಸ್ ವಾಹನಕ್ಕೆ ಹಾಕಿದಿದ್ದಾರೆ. ಈವರೆಗೂ ನಗರಸಭೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ.