ಉತ್ತರ ಕನ್ನಡ: ಇಸ್ರೇಲ್ ಹಾಗೂ ಪ್ಯಾಲೆಸ್ತೇನ್ನ ಹಮಾಸ್ ಉಗ್ರರ ನಡುವೆ ಯುದ್ಧ ನಡೆದಿದೆ. ಈ ಹಿನ್ನಲೆ ಇಂದು(ನ.17) ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪ್ಯಾಲೆಸ್ತೇನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಮೌನ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಭಾರತದ ಧ್ವಜದೊಂದಿಗೆ ಪ್ಯಾಲೆಸ್ತೇನ್ ಧ್ವಜ ಪ್ರದರ್ಶಿಸಿ ಬೆಂಬಲ ವ್ಯಕ್ತಪಡಿಸಿದ್ದು, ವಿವಿಧ ಘೋಷಣೆಗಳ ನಾಮಫಲಕ ಹಿಡಿದು ಎಸಿ ಕಚೇರಿಯೆದುರು ಐನೂರಕ್ಕೂ ಅಧಿಕ ಮುಸ್ಲಿಮರು ಜಮಾಯಿಸಿದ್ದಾರೆ. ಪ್ಯಾಲೆಸ್ತೇನ್ ವಿಷಯದಲ್ಲಿ ಭಾರತ ಸರ್ಕಾರದ ನಿಲುವಿಗೆ ಭಟ್ಕಳ ಮುಸ್ಲಿಂಮರು ಬೆಂಬಲ ಸೂಚಿಸಿ, ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.