ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು ಸರಕಾರದ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳಲ್ಲಿ ತಯಾರಿಸಿದ 2.75 ಲಕ್ಷ ಧ್ವಜಗಳನ್ನು ಈಗಾಗಲೇ ಜಿಲ್ಲೆಯಲ್ಲಿ ವಿತರಿಸಲಾಗಿದೆ. ಆ 13 ರಿಂದ 15ರ ವರೆಗೆ ಮನೆಗಳಲ್ಲಿ ಧ್ವಜಗಳನ್ನು ಹಾರಿಸಲು ಅವಕಾಶವಿದೆ ಎಂದರು.
ಅಮೃತ ಮಹೋತ್ಸವದ ಅಂಗವಾಗಿ ನಡೆಸುತ್ತಿರುವ ಮನೆ ಮನೆಯಲ್ಲಿ ರಾಷ್ಟ್ರ ಧ್ವಜ ಅಭಿಯಾನದಲ್ಲಿ ಧ್ವಜಕ್ಕೆ ಅವಮಾನ ಆಗದ ರೀತಿ ನೋಡಿಕೊಳ್ಳಬೇಕು ಎಂದರು. ಸ್ವಾತಂತ್ರೋತ್ಸವ ಮುಕ್ತಾಯದ ಬಳಿಕ ಸಾರ್ವಜನಿಕರು ಧ್ವಜವನ್ನು ಗೌರವಯುತವಾಗಿ ಕಾಪಾಡಿಕೊಳ್ಳಬೇಕು ಎಂದರು.