News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ರಾಷ್ಟ್ರೀಯ ಲೋಕ ಅದಾಲತ್ ರಾಜಿ ಸಂದಾನದಲ್ಲಿ 23,064 ಪ್ರಕರಣ ಇತ್ಯರ್ಥ

ಹೆಂಡತಿ ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಕೆಯ ಪತಿಗೆ ಬೀದರ್‌ನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
Photo Credit : Pixabay

ಕಾರವಾರ: ರಾಷ್ಟ್ರೀಯ ಲೋಕ ಅದಾಲತ್ ರಾಜಿ ಸಂದಾನದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟೂ 23,064 ಪ್ರಕರಣಗಳ ಇತ್ಯರ್ಥವಾಗಿದೆ. ಜಿಲ್ಲಾ  ಕಾನೂನು ಸೇವೆಗಳ ಪ್ರಾಧಿಕಾರ,ಕಾರವಾರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಗಳಆಶ್ರಯದಲ್ಲಿರಾಷ್ಟ್ರೀಯ ಲೋಕ ಅದಾಲತ್‍ಹಮ್ಮಿಕೊಳ್ಳಲಾಯಿತು.

ಜಿಲ್ಲೆಯಾದ್ಯಂತ ಒಟ್ಟೂ30 ಪೀಠಗಳಲ್ಲಿ 17,989 ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ 5075 ಪ್ರಕರಣಗಳಲ್ಲಿ ಸೇರಿದಂತೆ ಒಟ್ಟೂ 23,064 ಪ್ರಕರಣಗಳು ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಇತ್ಯರ್ಥ ಮಾಡಲಾಯಿತು. ಹಾಗೂ ಈ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸಾಲ ಮರುಪಾವತಿ,ಪರಿಹಾರ, ದಂಡ ಹಾಗೂ ಇತ್ಯಾದಿ ಹಣಕಾಸಿನ ಪ್ರಕರಣಗಳಿಗೆ ಸಂಬಂಧಪಟ್ಟಂತೆ  ಒಟ್ಟು  28,72,39,285 ರೂ.ಹಣ ಸಂಗ್ರಹಮತ್ತು ಪಾವತಿಯಾಗಿದೆ.

ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಹೆಚ್ಚಿನ ಪ್ರಕರಣಗಳು ರಾಜಿಯಾಗಲು ಸಹಕರಿಸಿದ ಜಿಲ್ಲೆಯ ಎಲ್ಲಾ ನ್ಯಾಯಾಧೀಶರುಗಳಿಗೆ,ಎಲ್ಲಾ  ವಕೀಲರುಗಳಿಗೆ, ಸರಕಾರಿ ಅಭಿಯೋಜಕರಿಗೆ, ಪೊಲೀಸ್‍ ಇಲಾಖೆಯವರಿಗೆ, ಕಾರ್ಮಿಕ ಇಲಾಖೆಯವರಿಗೆ,ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ, ಇತರೆ ಇಲಾಖೆ ಅಧಿಕಾರಿಗಳಿಗೆ,ನ್ಯಾಯಾಲಯದ ಸಿಬ್ಬಂದಿಗಳಿಗೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿಗಳಿಗೆ, ಕಕ್ಷಿದಾರರಿಗೆ ನಗರ ಸಭೆಯ ಆಯುಕ್ತರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ್ ಹಾಗೂಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾಡಿ.ರಾಯ್ಕರ್ ಅಭಿನಂದನೆ  ಸಲ್ಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು