News Karnataka Kannada
Thursday, May 09 2024
ಉತ್ತರಕನ್ನಡ

ಕಾರವಾರ: ಜಿಲ್ಲಾಡಳಿತದಿಂದ 75 ಕಿ.ಮೀ. ಸೈಕಲ್ ಜಾಥಾ

Karwar: 75 km from the district administration. Bicycle Jatha
Photo Credit : By Author

ಕಾರವಾರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರವಾರ ಬೈಸಿಕಲ್ ಕ್ಲಬ್ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಆಜಾದಿ ಕಾ ಅಮೃತ ಮಹೋತ್ಸವ ಬೈಸಿಕಲ್ ರ್ಯಾಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಅವರು ಚಾಲನೆ ನೀಡಿದರು.

ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಬೆಳಿಗ್ಗೆ 4 : 30 ಕ್ಕೆ 75 ಕಿ.ಮೀ. ಬೈಸಿಕಲ್ ರೈಡ್ ಕಾರ್ಯಕ್ರಮ ಆಯೋಜಿಸಲಾಗಿತ್ತು. 150 ಕ್ಕೂ ಹೆಚ್ಚು ಕ್ರೀಡಾಪಟುಗಳು ಹಾಗೂ ನೇವಿ ಅಧಿಕಾರಿಗಳು, ಕೆಬಿಸಿ ಕ್ಲಬ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಎಒ ಸತೀಶ್ ಜಿ ಪವಾರ್, ಸಿಪಿಒ ವಿನೋದ ಅನ್ವೇಕರ್, ಆನಂದ,ಸುನೀಲ ನಾಯ್ಕ್, ಪ್ರವೀಣ ಕುಮಾರ ಬೈಸಿಕಲ್ ರೈಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬೈಸಿಕಲ್ ರೈಡ್ ನಡೆಯುವ ರಸ್ತೆಯುದ್ದಕ್ಕೂ ಆರೋಗ್ಯ ಇಲಾಖೆ ‘108’ ಸಿಬ್ಬಂದಿ, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿ ಹಾಗೂ ವಿವಿಧ ಗ್ರಾಮ ಮಟ್ಟದ ಜನಪ್ರತಿನಿಧಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಕ್ರೀಡಾಪಟುಗಳನ್ನು ಹುರಿದುಂಬಿಸುವ ಕಾರ್ಯ ಮಾಡುವುದರ ಜೊತೆಗೆ ಕ್ರೀಡಾಪಟುಗಳಿಗೆ ಅನಾನುಕೂಲವಾಗದ ರೀತಿಯಲ್ಲಿಸೂಕ್ತ ವ್ಯವಸ್ಥೆ ಕಲ್ಪಿಸಿದ್ದರು. ಕಾರ್ಯಕ್ರಮವು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಮ್ ಅವರ ನೇತೃತ್ವದಲ್ಲಿ ಸಮಾರೋಪಗೊಂಡಿತು. ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ನಿತಿನ್ ಪಿಕಳೆ, ಸಹಾಯಕ ಆಯುಕ್ತೆ ವಿಜಯಲಕ್ಷ್ಮಿ ರಾಯಕೋಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ಪ್ರವೀಣಕುಮಾರ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು