ಕಾರವಾರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಕೋಲಾ-ಹುಬ್ಬಳ್ಳಿ ರೈಲ್ವೆ ಅನುಷ್ಠಾನದ ಬಗ್ಗೆ ಮಹತ್ವದ ಚರ್ಚೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಗೆ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಅಂಕೋಲಾ-ಹುಬ್ಬಳ್ಳಿ ರೈಲ್ವೆ ಯೋಜನೆ ಅನುಷ್ಠಾನದ ಬಗ್ಗೆ ಮಹತ್ವದ ಸಭೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ರೈಲ್ವೆ ಯೋಜನಾ ಸಮಿತಿಯ ಜೊತೆ ನಡೆಯಿತು.

ಜಿಲ್ಲೆಯು ಅಭಿವೃದ್ಧಿಯಾಗುವ ನಿಟ್ಟಿನಲ್ಲಿ ರೈಲು ಮಾರ್ಗ ಕಾಮಗಾರಿ ಪ್ರಾರಂಭವಾಗುವುದು ಅವಶ್ಯಕವಾಗಿದ್ದು, ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯು ಸಹ ಇದಾಗಿದೆ ಎಂದು ಕೇಂದ್ರದ ರೈಲ್ವೆ ಯೋಜನಾ ಸಮಿತಿ ಅಭಿಪ್ರಾಯ ವ್ಯಕ್ತಪಡಿಸಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಹುಬ್ಬಳ್ಳಿ-ಅಂಕೋಲಾ ರೈಲಿನ ಬೇಡಿಕೆಯ ಕುರಿತಾದ ಚರ್ಚೆಯ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಯೋಜನಾ ಸಮಿತಿಯ ಅಧಿಕಾರಿಗಳು ಮೇಲಿನ ರೀತಿ ಅಭಿಪ್ರಾಯಕ್ಕೆ ಬಂದರು.

ರೈಲ್ವೆ ಯೋಜನೆಯ ಸಾಧಕ ಬಾಧಕ ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಯಿತು. ರೈಲ್ವೆ ಯೋಜನೆಯಿಂದಾಗಿ ಅಪಾರ ಪ್ರಮಾಣದ ಅರಣ್ಯ ನಾಶವಾಗುವುದು. ವನ್ಯಪ್ರಾಣಿಗಳ ವಾಸಸ್ಥಾನದ ಪಲ್ಲಟವಾಗುವ ಆತಂಕವಿದೆ. ಅರಣ್ಯ ನಾಶದಿಂದ ಮಳೆಗಾಲದ ಸಂದರ್ಭದಲ್ಲಿ ಮಳೆ ನೀರಿನ ಹರಿವಿನ ದಿಕ್ಕು ಬದಲಾವಣೆಯಾಗುವುದರಿಂದ ನೀರಿನ ಹಂಚಿಕೆಯಲ್ಲಿ ಅಭಾವ ಸೃಷ್ಠಿಯಾಗಬಹುದು. ಗುಡ್ಡ ಕುಸಿತ ಪ್ರದೇಶಗಳಲ್ಲಿ ಈ ಯೋಜನೆ ಫಲದಾಯಕವಲ್ಲ ಎಂಬ ಅಭಿಪ್ರಾಯ ಚರ್ಚೆಗೊಂಡಿದೆ. ಕೇಂದ್ರ ರೈಲ್ವೆ ಯೋಜನೆ ಸಮಿತಿ ಅಧಿಕಾರಿಗಳು ಯೋಜನೆಯ ಕುರಿತಾಗಿ ಮಾತನಾಡಿ, ಈ ಯೋಜನೆಯು ಜಿಲ್ಲೆಯ ಅಭಿವೃದ್ಧಿ ದೃಷ್ಠಿಯಿಂದ ಉತ್ತಮವಾದ ಯೋಜನೆಯಾಗಿದೆ. ಜನಸಂಚಾರ, ಸರಕು ಸಾಗಣೆಗೆ ಹಾಗೂ ಸಮಯದ ಉಳಿತಾಯವಾಗುವುದರಿಂದ ಈ ಯೋಜನೆಯನ್ನು ಜಿಲ್ಲೆಯ ಜನ ಸ್ವಾಗತಿಸುತ್ತಾರೆ.

ಅಭಿವೃದ್ಧಿ ಕಾರಣದಿಂದಾಗಿ ಕೆಲವು ಬದಲಾವಣೆಗಳಿಗೆ ಒಪ್ಪಿಕೊಳ್ಳುವಂತ ನಿರ್ಧಾರಕ್ಕೆ ಬರಲೇಬೇಕು ಎಂದು ತಿಳಿಸಿದರು. ಬಹು ಕೋಟಿ ವೆಚ್ಚದ ಯೋಜನೆ ಇದಾಗಿರುವುದರಿಂದ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬೆಳವಣಿಗೆ ಕಾಣಬಹುದಾಗಿದೆ. ವಿಪತ್ತು ನಿರ್ವಹಣೆ ಮಾಡುವಲ್ಲಿ ಅಗತ್ಯ ಕಾರ್ಯಸೂಚಿಗಳನ್ನು ಅಳವಡಿಸಿಕೊಳ್ಳಬೇಕು. ರೈಲ್ವೇ ಮಾರ್ಗವನ್ನು ಮಾಡುವ ಸಂದರ್ಭದಲ್ಲಿ ನಿಗದಿತ ಅಂತರದಲ್ಲಿ ಟನಲ್‌ಗಳನ್ನು, ರೈಲ್ವೆ ಕ್ರಾಸಿಂಗ್ ನಿರ್ವಹಿಸುವ ಮೂಲಕ ಹೆಚ್ಚಿನ ಪ್ರಮಾಣದ ಅರಣ್ಯ ನಾಶವನ್ನು ತಡೆಗಟ್ಟಬಹುದಾಗಿದೆ. ಪ್ರಾಣಿಗಳ ಓಡಾಟಕ್ಕೆ ಅನುಕೂಲವಾಗುವ ರೀತಿಯಲ್ಲಿ ಮಾರ್ಗದುದ್ದಕ್ಕೂ ಅಗತ್ಯ ಪರ್ಯಾಯ ವ್ಯವಸ್ಥೆಯನ್ನು ಒದಗಿಸಿ ಪ್ರಾಣಿಗಳ ಜೀವಹಾನಿಯನ್ನು ತಡೆಗಟ್ಟಬೇಕು. ಯೋಜನೆಯ ಮಾರ್ಗಕ್ಕೆ ಪೂರಕವಾಗಿ ರಸ್ತೆ ಸಂಪರ್ಕ, ನೀರು ಹಾಗೂ ವಿದ್ಯುತ್ ಸಂಪರ್ಕಕಲ್ಪಿಸಬೇಕು.

ಸರ್ವಋತು ಯೋಗ್ಯವಾದ ರೀತಿಯಲ್ಲಿ ರೈಲ್ವೆ ಕಾಮಗಾರಿ ಯೋಜನೆ ಅನುಷ್ಠಾನಗೊಳ್ಳಲು ಯೋಜನೆ ರೂಪಿಸಬೇಕು ಎಂದು ತಿಳಿಸಿದರು. ಈ ಸಭೆಯಲ್ಲಿ ರೈಲ್ವೆ ಯೋಜನಾ ಸಮಿತಿ ಅಧಿಕಾರಿಗಳಾದ ಡಾ.ಎಚ್.ಎಸ್.ಸಿಂಗ್, ಭಾರತೀಯ ಅರಣ್ಯ ಸೇವೆಯ ವಿಜಯಕುಮಾರ, ಭಾರತೀಯ ಅರಣ್ಯ ಸೇವಾ ಡಿಐಜಿ ರಾಕೇಶ, ಡಾ. ರಾಜೇಂದ್ರಕುಮಾರ, ಡಾ.ಟಿ.ಎನ್. ಮನೋಹರ, ಪ್ರೋ. ನಾಗೇಶ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಕಾರವಾರ ವಿಭಾಗದ ಅರಣ್ಯಾಧಿಕಾರಿ ರಾಘವೇಂದ್ರ ನಾಯ್ಕ ಹಾಗೂ ಇತರ ಅಧಿಕಾರಿ, ಸಿಬ್ಬಂದಿಗಳು ಇದ್ದರು.

Gayathri SG

Recent Posts

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

20 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

38 mins ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

50 mins ago

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

1 hour ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

1 hour ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

1 hour ago