ಕಾರವಾರ: ರಾಣಿಬೆನ್ನೂರಿನಿಂದ ಶಿರಸಿಯ ಮಾರಿಕಾಂಬಾ ಮತ್ತು ಬನವಾಸಿ ದೇವಸ್ಥಾನಕ್ಕೆ ತೆರಳುತ್ತಿದ್ದ ಮಿನಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬನವಾಸಿ ಬಳಿ ಶುಕ್ರವಾರ ನಡೆದಿದೆ.
ಮೃತರನ್ನು ಶಾಲಾ ಸಿಬ್ಬಂದಿ ಕಸ್ತೂರಮ್ಮ (50) ಎಂದು ಗುರುತಿಸಲಾಗಿದೆ. ಕುಮಟಾ-ಹಾವೇರಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ 766(ಇ)ಯ ಬುಗಡಿಕೊಪ್ಪ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ರಾಣಿಬೆನ್ನೂರಿನ ಸಿರುದನಗರದ ಖಾಸಗಿ ಶಾಲೆ ಬಸ್ ಇದಾಗಿದೆ.
ಶಾಲಾ ಸಿಬ್ಬಂದಿ ದೇವರ ದರ್ಶನ ಪಡೆಯಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.