News Karnataka Kannada
Friday, May 03 2024
ಉತ್ತರಕನ್ನಡ

ಕಾರವಾರ: ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಮನವಿ

Kar
Photo Credit : By Author

ಕಾರವಾರ: ತಾಲೂಕಿನಲ್ಲಿ ಮರಳು ಸಿಗದೆ ವಿವಿಧ ಅಭಿವೃದ್ಧಿ ಚಟುವಟಿಕೆಗಳು, ನಿರ್ಮಾಣ ಕಾಮಗಾರಿಗಳಿಗೆ ಸಮಸ್ಯೆ ಉಂಟಾಗುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ವಿವಿಧ ಸಂಘಟನೆಗಳಿಂದ ಮನವಿ ರವಾನಿಸಲಾಗಿದೆ.

ಕಾರವಾರ ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘ, ಕಾರವಾರ ಸಿವಿಲ್ ಸಲಹಾ ಅಭಿಯಂತರರ ಸಂಘ, ಹೊನ್ನಾವರ ಲಾರಿ ಟಿಪ್ಪರ್ ಚಾಲಕ ಮತ್ತು ಮಾಲಕರ ಸಂಘ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳು ಹಾಗೂ ಸಾರ್ವಜನಿಕರನ್ನೊಡಗೂಡಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕಾರವಾರ ತಾಲೂಕು ನೋಂದಾಯಿತ ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಾಧವ ನಾಯಕ, ಒಂದು ಕಾಲದಲ್ಲಿ ಕಾರವಾರದಿಂದ ಗೋವಾಕ್ಕೆ ನೂರಾರು ಲೋಡ್ ಮರಳು ಸಾಗಾಟವಾಗುತ್ತಿತ್ತು. ಆದರೀಗ ಮರಳುಗಾರಿಕೆಯನ್ನೇ ಸ್ಥಗಿತಗೊಳಿಸಿರುವುದು ಬಹಳಷ್ಟು ಅಭಿವೃದ್ಧಿ ಚಟುವಟಿಕೆಗಳು ಕುಂಠಿತವಾಗಲು ಕಾರಣವಾಗಿದೆ. ಮರಳಿಗೆ ಪರ್ಯಾಯ ಎನ್ನಲಾಗುತ್ತಿರುವ ಎಂ.ಸ್ಯಾಂಡ್ ನಿರ್ಮಾಣ ಚಟುವಟಿಕೆಗಳಿಗೆ ಯೋಗ್ಯವಲ್ಲ.

ಇನ್ನು ಕನಿಷ್ಠ 10 ಟನ್ ಮರಳಿಗೆ ಪರವಾನಗಿ ನೀಡಲಾಗುತ್ತಿದೆ. ಬಡವರು ಮನೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ, ಸಣ್ಣಪುಟ್ಟ ದುರಸ್ತಿ ಕಾರ್ಯವಿರುವವರು ಇಷ್ಟೊಂದು ಮರಳನ್ನು ನಿಯಮದ ಪ್ರಕಾರ ತೆಗದುಕೊಳ್ಳಲೇಬೇಕಾ? ಎಂದು ಪ್ರಶ್ನಿಸಿದರು.

ಹೀಗಾಗಿ ಶೀಘ್ರವೇ ಈ ಬಗ್ಗೆ ಕಾರ್ಯೋನ್ಮುಖರಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದರಲ್ಲೂ ಕಾರವಾರದಲ್ಲಿ ಮರಳುಗಾರಿಕೆಗೆ ಅವಕಾಶ ಮಾಡಿಕೊಡಬೇಕಿದೆ. ಸರ್ಕಾರದಿಂದ ಹಸಿರು ಪೀಠಕ್ಕೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟು, ಮರಳಿಗೆ ಸಂಬಂಧಿಸಿದಂತೆ ಇರುವ ವ್ಯಾಜ್ಯಗಳನ್ನು ಬಗೆಹರಿಸಲು ಕ್ರಮವಹಿಸಬೇಕಿದೆ ಎಂದು ಮನವಿ ಮಾಡಿಕೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು