News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ದೇಶವಿಭಜನೆಯ ದುರಂತ ಘಟನೆಗಳ ಛಾಯಾಚಿತ್ರ ಪ್ರದರ್ಶನ

A photo exhibition of the tragic events of partition
Photo Credit : By Author

ಕಾರವಾರ: ಭಾರತ ಸರ್ಕಾರ  ಹಾಗೂ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ  ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಇಲ್ಲಿನ ಜಿಲ್ಲಾಡಳಿತ ಭವನ ಹತ್ತಿರದ ನಮ್ಮ ಕಾರವಾರ ಉದ್ಯಾನವನದಲ್ಲಿ  ಆಯೋಜಿಸಿರುವ ದೇಶ ವಿಭಜನೆಯ ದುರಂತ ಘಟನೆಗಳ ಛಾಯಾಚಿತ್ರ ಪ್ರದರ್ಶನಕ್ಕೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿ, ಛಾಯಾಚಿತ್ರಗಳನ್ನು ವೀಕ್ಷಿಸಿದರು.

ಭಾರತದ ವಿಭಜನೆಯು ಮನುಕುಲದ ಇತಿಹಾಸದಲ್ಲಿಯೇ ಎಂದೂ ಕೇಳರಿಯದ ಬಲವಂತದ ಮಹಾ ಮಾನವ ವಲಸೆಯ ವ್ಯಾಕುಲದ ಕಥೆಯಾಗಿದೆ. ಲಕ್ಷಾಂತರ ಜನ ಅಪರಿಚಿತ ಜಾಗದಲ್ಲಿ ತಮ್ಮ ಜೀವನಕಟ್ಟಿಕೊಳ್ಳಲು, ಹೊಸ ಬದುಕು ಅರಸಿ ಹೊರಟ ಘಟನೆಗಳನ್ನು ಈ ಪ್ರದರ್ಶನ ನೆನಪಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯ ಪಟ್ಟರು.

ನೂರಾರು ಸಾರ್ವಜನಿಕರು ಮತ್ತು ವಿವಿಧ ಶಾಲಾ ಕಾಲೇಜುಗಳ  ವಿದ್ಯಾರ್ಥಿಗಳು  ಪ್ರದರ್ಶನ ವೀಕ್ಷಿಸಿದರು.ಆ. 15 ರವರೆಗೆ  ಈ ಛಾಯಾಚಿತ್ರಗಳ ಪ್ರದರ್ಶನ ಮುಂದುವರೆಯಲಿದೆ. ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ ಪಿ., ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಸಹಾಯಕ ಆಯುಕ್ತೆ ಜಯಲಕ್ಷ್ಮೀ ರಾಯಕೋಡ, ನಗರಸಭೆ ಅಧ್ಯಕ್ಷ ನಿತಿನ್ ಪಿಕಳೆ,  ತಹಶೀಲ್ದಾರ್ ಎನ್. ಎಫ್ ನೊರೋನಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿ ಪ್ರತೀಕ್ ಶೆಟ್ಟಿ ಹಾಗೂ ಜಿಲ್ಲಾ ಮಟ್ಟದ ವಿವಿಧ  ಇಲಾಖೆ ಸಿಬ್ಬಂದಿಗಳು ಮತ್ತು ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು  ಮತ್ತು  ಸಾರ್ವಜನಿಕರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು