ಕಾರವಾರ: ಚಲಿಸುತ್ತಿದ್ದ ಸಿಮೆಂಟ್ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಲಾರಿ ಸಂಪೂರ್ಣ ಭಸ್ಮವಾದ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ಮಂಗಳವಾರ ನಡೆದಿದೆ.
ಮಂಗಳೂರಿನಿಂದ ಬಾಗಲಕೋಟೆಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಇದಾಗಿದ್ದು ಒಂದೇ ಸಮನೆ ಬೆಂಕಿ ಹೊತ್ತಿಕೊಂಡಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೆದ್ದಾರಿ ಮಧ್ಯದಲ್ಲಿಯೇ ಹೊತ್ತಿ ಊರಿದ ಕಾರಣದಿಂದ ಕೆಲ ಹೊತ್ತು ಟ್ರ್ಯಾಫಿಕ್ ಜಾಮ್ ಸಹ ಆಗಿತ್ತು. ಬೆಂಕಿ ಅವಘಡದಿಂದ ಲಕ್ಷಾಂತರ ರೂ. ನಷ್ಟವಾಗಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ಆರಿಸುವ ಪ್ರಯತ್ನದಲ್ಲಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.