News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ೨೦ ಮರಳು ದಿಬ್ಬಗಳನ್ನು ತೆರವುಗೊಳಿಸಲು ಕ್ರಮ- ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

Kar
Photo Credit : By Author

ಕಾರವಾರ: ಜಿಲ್ಲೆಯ ವಿವಿಧ ತಾಲೂಕುಗಳ ಒಟ್ಟೂ ೨೦ ಮರಳು ದಿಬ್ಬಗಳನ್ನು ತೆರವುಗೊಳಿಸಲು ಸಿಆರ್ಝಡ್ ಸಮಿತಿ ಮೂಲಕ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಸಿಆರ್ಝಡ್ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮರಳು ದಿಬ್ಬಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ಪಡೆದುಕೊಂಡರು.

ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಮೀನುಗಾರಿಕಾ ದೋಣಿಗಳು ಮತ್ತು ಸ್ಥಳೀಯ ಗೃಹೋಪಯೋಗಿ ದೋಣಿಗಳ ಸಂಚಾರಕ್ಕೆ ಅಡ್ಡಿ ಪಡಿಸುವ ಮರಳು ದಿಬ್ಬಗಳನ್ನು ತೆರವುಗೊಳಿಸುವಂತೆ ಸ್ವೀಕೃತಿಯಾದ ಮನವಿಯ ಅನುಸಾರ ಕಾರವಾರ ತಾಲೂಕಿನ ಕಾಳಿ ನದಿ ಪಾತ್ರದಲ್ಲಿ ೭ ಮರಳು ದಿಬ್ಬಗಳು, ಅಂಕೋಲಾ ತಾಲೂಕಿನ ಗಂಗಾವಳಿ ನದಿ ಪಾತ್ರದಲ್ಲಿ ೨ ಮರಳು ದಿಬ್ಬಗಳು, ಕುಮಟಾ ತಾಲೂಕಿನ ಅಘನಾಶಿನಿ ನದಿ ಪಾತ್ರದಲ್ಲಿ ೪ ಮರಳು ದಿಬ್ಬಗಳು ಮತ್ತು ಹೊನ್ನಾವರ ತಾಲೂಕಿನ ಶರಾವತಿ ನದಿ ಪಾತ್ರದಲ್ಲಿ ೭ ಮರಳು ದಿಬ್ಬಗಳಂತೆ ಒಟ್ಟು ೨೦ ಮರಳು ದಿಬ್ಬಗಳನ್ನು ತೆರವುಗೊಳಿಸಲು ಎನ್.ಐ.ಟಿ.ಕೆ. ತಜ್ಞರು ನೀಡಿರುವ ವರದಿಯನ್ನು ಪರಿಶೀಲಿಸಿ ಮರಳು ದಿಬ್ಬಗಳನ್ನು ತೆರವುಗೊಳಿಸವ ಸಂಬಂಧ ಸಿಆರ್ಝಡ್ ಅನುಮತಿ ಪಡೆಯಲು ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರಗೆ ಪ್ರಸ್ತಾವನೆಯನ್ನು ಸಲ್ಲಿಸಲು ಜಿಲ್ಲಾ ಸಿಆರ್ಝಡ್ ಸಮಿತಿ ಮೂಲಕ ಕ್ರಮ ವಹಿಸುವ ಕುರಿತು ಸಭೆಯಲ್ಲಿ ನಿರ್ಣಯಿಸಲಾಯಿತು.

ಸಭೆಯಲ್ಲಿ ಹಿರಿಯ ಭೂವಿಜ್ಞಾನಿ ಆಶಾ ಎಂ. ಎಸ್., ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರ ತಳೇಕರ, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಪ್ರಸನ್ನ ಪಟಗಾರ ಮುಂತಾದವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು