News Karnataka Kannada
Thursday, May 02 2024
ಉತ್ತರಕನ್ನಡ

ಕಾರವಾರ: ಕಬ್ಬು ಬೆಳೆಗಾರರ ನಿರೀಕ್ಷೆಗಳೆಲ್ಲವೂ ಹುಸಿಯಾಗಿದೆ ಎಂದ ನಾಗೇಂದ್ರ ಜೀವೋಜಿ

Karwar: All the hopes of sugarcane farmers have been dashed, says Nagendra Jeevoji
Photo Credit : By Author

ಕಾರವಾರ: ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯ ಆಯುಕ್ತರ ಸಭೆಯ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದೆವು. ಆದರೆ ನಮ್ಮ ನಿರೀಕ್ಷೆಗಳೆಲ್ಲವೂ ಹುಸಿಯಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ಹಿರಿಯ ಮುಖಂಡ ನಾಗೇಂದ್ರ ಜೀವೋಜಿ ತಿಳಿಸಿದ್ದಾರೆ.

ಇಲ್ಲಿ ಮಾತನಾಡಿರುವ ಅವರು, ಜಿಲ್ಲೆಯಲ್ಲಿರುವ ಏಕೈಕ ಸಕ್ಕರೆ ಕಾರ್ಖಾನೆಯಾಗಿರುವ ಇಐಡಿ ಪ್ಯಾರಿ ಹಳಿಯಾಳದಲ್ಲಿದೆ. ಈ ಕಾರ್ಖಾನೆಯಿಂದ ಎಲ್ಲಾ ಹಂತದಲ್ಲಿ ರೈತರಿಗೆ ಮೋಸವಾಗುತ್ತಿದೆ. ಎಚ್ ಆ್ಯಂಡ್ ಟಿ ಹೆಸರಿನಲ್ಲಿ ಪ್ರತಿ ರೈತನಿಂದ 350- 400 ರೂ. ಹೆಚ್ಚುವರಿಯಾಗಿ ಆಕರಣೆ ಮಾಡಿಕೊಳ್ಳುತ್ತಿದ್ದಾರೆ.

ಕಡಿಮೆ ರಿಕವರಿ ತೋರಿಸಿ ಎಫ್‌ಆರ್‌ಪಿ ಕಡಿಮೆ ಕೊಡುತ್ತಿದ್ದಾರೆ ಎಂದರು. ಎಚ್ ಆ್ಯಂಡ್ ಟಿ ಪರಿಶೀಲನೆ ನಡೆಸಿ, ಅದರಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಮರಳಿ ಕೊಡಿಸುವುದಾಗಿ ಹೇಳಿದ್ದಾರೆ. ಇದೊಂದು ಒಳ್ಳೆಯ ನಿರ್ಧಾರವನ್ನು ಸಭೆಯಲ್ಲಿ ಕೈಗೊಂಡಿದ್ದಾರೆ. ಅದನ್ನ ಬಿಟ್ಟು ಬೇರೇನೂ ಆಗಿಲ್ಲ. ಅ.15ಕ್ಕೆ ಬೆಂಗಳೂರಿನಲ್ಲಿ ಸಭೆ ಇದ್ದು, ಯೋಗ್ಯ ಬೆಲೆ ಹಾಗೂ ಎಚ್ ಆ್ಯಂಡ್ ಟಿ ಬಗ್ಗೆ ಪರಿಶೀಲನೆ ನಡೆಸುವ ಭರವಸೆ ನೀಡಿದ್ದಾರೆ.

ಆ ಸಭೆಯಲ್ಲಾದರೂ ನಮ್ಮ ಬೇಡಿಕೆ ಈಡೇರಲಿ. ಇಲ್ಲದಿದ್ದರೆ ಇನ್ನಷ್ಟು ಉಗ್ರ ಪ್ರತಿಭಟನೆ ಕೈಗೊಳ್ಳಬೇಕಾಗುವುದು ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು