ಕಾರವಾರ: ನಗರದ ಹಿಂದೂ ಪ್ರೌಢ ಶಾಲೆಯ ೧೨೫ನೇ ವರ್ಷಾಚರಣೆಯ ಪ್ರಯುಕ್ತ ಆಯೋಜಿಸಿದ ಕರಿರ್ಸ್ ವಿಷಯದ ಬಗ್ಗೆ ವಿಚಾರ ವಿಚಾರ ಗೋಷ್ಠಿ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ ಡಿ.ವೈ.ಎಸ್ಪಿ ಹಾಗೂ ಬಾಲಮಂದಿರ ಪ್ರೌಢ ಶಾಲೆಯ ಮಾಜಿ ವಿದ್ಯಾರ್ಥಿನಿಯೂ ಧನ್ಯಾ ಎನ್. ನಾಯಕ ಅವರು ಪಾಲ್ಗೊಂಡು ಕಾರ್ಯಕ್ರಮ ನಡೆಸಿಕೊಟ್ಟರು.
ಈ ವೇಳೆ ಮಾತನಾಡಿದ ಅವರು ಜೀವನದಲ್ಲಿ ಸತತ ಪರಿಶ್ರಮ ಮತ್ತು ಗುರಿ ಹೊಂದಿದ್ದರೆ ಏನನ್ನಾದರೂ ಸಾಧಿಸಬಹುದು ಎಂದರು. ಅವರು ವಿಚಾರ ಗೋಷ್ಠಿಯಲ್ಲಿ ಪಾಲ್ಗೊಂಡಿರುವ ಹಿಂದೂ ಪ್ರೌಢಶಾಲೆ, ಸುಮತಿ ದಾಮ್ಲೆ ಬಾಲಕಿಯರ ಪ್ರೌಢಶಾಲೆ ಹಾಗೂ ಬಾಲಮಂದಿರ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ತಮ್ಮ ಅನುಭವದ ಆಧಾರದ ಮೇಲೆ ಅನೇಕ ವಿಷಯಗನ್ನು ಮನವರಿಕಗೆ ಮಾಡಿಕೊಟ್ಟರು.
ಈ ಸಂದರ್ಭದಲ್ಲಿ ಕಾರವಾರ ಎಜ್ಯಕೇಶನ್ ಸೊಸೈಟಿಯ ಕಾರ್ಯದರ್ಶಿ ಅನಿರುದ್ಧ ಹಳದಿಪುರಕರ ಹಾಗೂ ಆಡಳಿತಾಧಿಕಾರಿ ಜಿ.ಪಿ. ಕಾಮತ್ ಅವರು ಮಾತನಾಡಿದರು. ಬಾಲಮಂದಿರ ಪ್ರೌಢ ಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಸ್ವಾಗತಿಸಿದರು. ಹಿಂದೂ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಅರುಣರಾಣೆ ವಂದಿಸಿದರು. ಶಿಕ್ಷಕ ಸಂತೋಷ್ ಶೇಟ್ ನಿರ್ವಹಿಸಿದರು.