News Karnataka Kannada
Saturday, May 18 2024
ಉತ್ತರಕನ್ನಡ

ಕಾರವಾರ: ಜೀವನದಲ್ಲಿ ಸತತ ಪರಿಶ್ರಮ ಮತ್ತು ಗುರಿ ಹೊಂದಿದ್ದರೆ ಏನನ್ನಾದರೂ ಸಾಧಿಸಬಹುದು

Karwar: Anything can be achieved if you have perseverance and a goal in life.
Photo Credit : By Author

ಕಾರವಾರ: ನಗರದ ಹಿಂದೂ ಪ್ರೌಢ ಶಾಲೆಯ ೧೨೫ನೇ ವರ್ಷಾಚರಣೆಯ ಪ್ರಯುಕ್ತ ಆಯೋಜಿಸಿದ ಕರಿರ‍್ಸ್ ವಿಷಯದ ಬಗ್ಗೆ ವಿಚಾರ ವಿಚಾರ ಗೋಷ್ಠಿ ಕಾರ್ಯಕ್ರಮ ನಡೆಯಿತು. ಬೆಂಗಳೂರಿನ ಡಿ.ವೈ.ಎಸ್ಪಿ ಹಾಗೂ ಬಾಲಮಂದಿರ ಪ್ರೌಢ ಶಾಲೆಯ ಮಾಜಿ ವಿದ್ಯಾರ್ಥಿನಿಯೂ ಧನ್ಯಾ ಎನ್. ನಾಯಕ ಅವರು ಪಾಲ್ಗೊಂಡು ಕಾರ್ಯಕ್ರಮ ನಡೆಸಿಕೊಟ್ಟರು.

ಈ ವೇಳೆ ಮಾತನಾಡಿದ ಅವರು ಜೀವನದಲ್ಲಿ ಸತತ ಪರಿಶ್ರಮ ಮತ್ತು ಗುರಿ ಹೊಂದಿದ್ದರೆ ಏನನ್ನಾದರೂ ಸಾಧಿಸಬಹುದು ಎಂದರು. ಅವರು ವಿಚಾರ ಗೋಷ್ಠಿಯಲ್ಲಿ ಪಾಲ್ಗೊಂಡಿರುವ ಹಿಂದೂ ಪ್ರೌಢಶಾಲೆ, ಸುಮತಿ ದಾಮ್ಲೆ ಬಾಲಕಿಯರ ಪ್ರೌಢಶಾಲೆ ಹಾಗೂ ಬಾಲಮಂದಿರ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ತಮ್ಮ ಅನುಭವದ ಆಧಾರದ ಮೇಲೆ ಅನೇಕ ವಿಷಯಗನ್ನು ಮನವರಿಕಗೆ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಕಾರವಾರ ಎಜ್ಯಕೇಶನ್ ಸೊಸೈಟಿಯ ಕಾರ್ಯದರ್ಶಿ ಅನಿರುದ್ಧ ಹಳದಿಪುರಕರ ಹಾಗೂ ಆಡಳಿತಾಧಿಕಾರಿ ಜಿ.ಪಿ. ಕಾಮತ್ ಅವರು ಮಾತನಾಡಿದರು. ಬಾಲಮಂದಿರ ಪ್ರೌಢ ಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಸ್ವಾಗತಿಸಿದರು. ಹಿಂದೂ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಅರುಣರಾಣೆ ವಂದಿಸಿದರು. ಶಿಕ್ಷಕ ಸಂತೋಷ್ ಶೇಟ್ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು