ಕಾರವಾರ: ಯಲ್ಲಾಪುರ ತಾಲೂಕಿನ ಕಿರವತ್ತಿ – ಮದನೂರ ಹಾಗೂ ಮುಂಡಗೋಡ ತಾಲೂಕಿನ ಗುಂಜಾವತಿ – ಮೈನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ 100 ಕೆರೆಗಳಿಗೆ ಬೇಡ್ತಿ ನದಿಯಿಂದ ಏತನೀರಾವರಿ ಮೂಲಕವಾಗಿ ನೀರು ತುಂಬಿಸುವ 274.50 ಕೋಟಿ ರೂಪಾಯಿ ವೆಚ್ಚದ ಯೋಜನೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದು ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
ಈ ನೀರಾವರಿ ಯೋಜನೆಯಿಂದ ಯಲ್ಲಾಪುರ ಹಾಗೂ ಮುಂಡಗೋಡ ತಾಲೂಕಿನ ಈ ನಾಲ್ಕು ಪಂಚಾಯತ ವ್ಯಾಪ್ತಿಯ ಸುಮಾರು 25 ಸಾವಿರಕ್ಕೂ ಅಧಿಕ ರೈತ ಕುಟುಂಬಗಳಿಗೆ ಆರ್ಥಿಕ ಬೆಳೆಯನ್ನು ಬೆಳೆಯುವುದಕ್ಕೆ ಅನೂಲವಾಗಲಿದೆ. ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ರೈತರ ಬಾಳಿನಲ್ಲಿ ಹೊಸ ಭರವಸೆಯನ್ನು ಮೂಡಿಸುವ ಈ ಯೋಜನೆ ಆಡಳಿತಾತ್ಮಕ ಅನುಮೋದನೆ ನೀಡಿದೆ.