ಕಾರವಾರ: ಕ್ಷೇತ್ರದ ಜನರ ಬೆಂಬಲದೊಂದಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಯಾಗುತ್ತಿದ್ದೆನೆ ಎಂದು ಹಾಸನ ಜಿಲ್ಲೆಯ ಅರಸಿಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಹೇಳಿದರು. ಅವರು ಶಿರಸಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ನನ್ನ ಕ್ಷೇತ್ರದ ಜನರ ತೀರ್ಮಾನದಂತೆ ಕಾಂಗ್ರೆಸ್ ಸೇರ್ಪಡೆ ಯಾಗುತ್ತಿದ್ದೇನೆ. ಈಗಾಗಲೇ ಅರಸಿಕೆರೆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನನಗೆ ಫೈನಲ್ ಆಗಿದೆ. ಜೆಡಿಎಸ್ ಪಕ್ಷದ ಹಿರಿಯ ನಾಯಕರು ಹಾಗೂ ನಮ್ಮ ಮಧ್ಯೆ ಇರುವ ಭಿನ್ನಾಭಿಪ್ರಾಯಗಳು ಬಗೆಹರಿಯುತ್ತಿಲ್ಲ.ರಾಜೀನಾಮೆ ನೀಡಲು ಇದೂ ಕಾರಣ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ನನ್ನ ಮನವೊಲಿಸಲು ಪ್ರಯತ್ನಿಸಿದ್ದು ನಿಜ. ಆದರೆ ಜನರ ತೀರ್ಮಾನವೇ ನನ್ನ ತೀರ್ಮಾನ ವಾಗಿದೆ. ಅವರ ಒತ್ತಾಸೆಯಂತೆ ಕಾಂಗ್ರೆಸ್ ಸೇರ್ಪಡೆ ಗೊಂಡಿದ್ದೇನೆ ಎಂದರು.
ನಾನು ಯಾರಿಗೂ ಸವಾಲುಗಳನ್ನು ಹಾಕಿಲ್ಲ. ಸವಾಲುಗಳನ್ನು ಹಾಕಿದವರಿಗೆ ಉತ್ತರ ವನ್ನು ನನ್ನ ಕ್ಷೇತ್ರದ ಜನರು ಚುನಾವಣೆ ಯಲ್ಲಿ ನೀಡುತ್ತಾರೆ ಎಂದು ಪರೋಕ್ಷವಾಗಿ ಪ್ರಜ್ವಲ್ ರೇವಣ್ಣ ಅವರ ಹೇಳಿಕೆಗೆ ತಿರುಗೇಟು ನೀಡಿದರು. ನಾನು ಯಾರನ್ನೂ ದ್ವೇಷಿಸುವುದಿಲ್ಲ ಜೆಡಿಎಸ್ ನಾಯಕರು ನಾವು ಚೆನ್ನಾಗಿಯೇ ಇದ್ದೇವೆ.ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಬರುವುದು ಸಹಜ ಎಂದರು. ಜೆಡಿಎಸ್ ಪಕ್ಷದ ಭವಿಷ್ಯ ದ ಬಗ್ಗೆ ಮಾತನಾಡುವುದಿಲ್ಲ. ಅದೆಲ್ಲ ಜನರ ತೀರ್ಮಾನ ವಾಗಿದೆ ಎಂದರು.