News Karnataka Kannada
Friday, May 03 2024
ಉತ್ತರಕನ್ನಡ

ಕಾರವಾರ: ಅರಸಿಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ರಾಜೀನಾಮೆ

Karwar: Arasikere MLA Shivalingegowda resigns
Photo Credit : News Kannada

ಕಾರವಾರ: ಕ್ಷೇತ್ರದ ಜನರ ಬೆಂಬಲದೊಂದಿಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಯಾಗುತ್ತಿದ್ದೆನೆ ಎಂದು ಹಾಸನ ಜಿಲ್ಲೆಯ ಅರಸಿಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಹೇಳಿದರು. ಅವರು ಶಿರಸಿಯಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ನನ್ನ ಕ್ಷೇತ್ರದ ಜನರ ತೀರ್ಮಾನದಂತೆ ಕಾಂಗ್ರೆಸ್ ಸೇರ್ಪಡೆ ಯಾಗುತ್ತಿದ್ದೇನೆ. ಈಗಾಗಲೇ ಅರಸಿಕೆರೆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನನಗೆ ಫೈನಲ್ ಆಗಿದೆ. ಜೆಡಿಎಸ್ ಪಕ್ಷದ ಹಿರಿಯ ನಾಯಕರು ಹಾಗೂ ನಮ್ಮ ಮಧ್ಯೆ ಇರುವ ಭಿನ್ನಾಭಿಪ್ರಾಯಗಳು ಬಗೆಹರಿಯುತ್ತಿಲ್ಲ.ರಾಜೀನಾಮೆ ನೀಡಲು ಇದೂ ಕಾರಣ. ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ನನ್ನ ಮನವೊಲಿಸಲು ಪ್ರಯತ್ನಿಸಿದ್ದು ನಿಜ. ಆದರೆ ಜನರ ತೀರ್ಮಾನವೇ ನನ್ನ ತೀರ್ಮಾನ ವಾಗಿದೆ. ಅವರ ಒತ್ತಾಸೆಯಂತೆ ಕಾಂಗ್ರೆಸ್ ಸೇರ್ಪಡೆ ಗೊಂಡಿದ್ದೇನೆ ಎಂದರು.

ನಾನು ಯಾರಿಗೂ ಸವಾಲುಗಳನ್ನು ಹಾಕಿಲ್ಲ. ಸವಾಲುಗಳನ್ನು ಹಾಕಿದವರಿಗೆ ಉತ್ತರ ವನ್ನು ನನ್ನ ಕ್ಷೇತ್ರದ ಜನರು ಚುನಾವಣೆ ಯಲ್ಲಿ ನೀಡುತ್ತಾರೆ ಎಂದು ಪರೋಕ್ಷವಾಗಿ ಪ್ರಜ್ವಲ್ ರೇವಣ್ಣ ಅವರ ಹೇಳಿಕೆಗೆ ತಿರುಗೇಟು ನೀಡಿದರು. ನಾನು ಯಾರನ್ನೂ ದ್ವೇಷಿಸುವುದಿಲ್ಲ ಜೆಡಿಎಸ್ ನಾಯಕರು ನಾವು ಚೆನ್ನಾಗಿಯೇ ಇದ್ದೇವೆ.ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಬರುವುದು ಸಹಜ ಎಂದರು. ಜೆಡಿಎಸ್ ಪಕ್ಷದ ಭವಿಷ್ಯ ದ ಬಗ್ಗೆ ಮಾತನಾಡುವುದಿಲ್ಲ. ಅದೆಲ್ಲ ಜನರ ತೀರ್ಮಾನ ವಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು