ಉತ್ತರಕನ್ನಡ

ಕಾರವಾರ: ಆನ್ಲೈನ್ ಗೇಮ್ ಗೀಳಿಗೆ ಬಿದ್ದು ಹಣ ಕಳೆದುಕೊಂಡ ಬ್ಯಾಂಕ್ ಅಧಿಕಾರಿ

ಕಾರವಾರ: ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದಲ್ಲಿ ನಡೆದಿದ್ದ 2.69 ಕೋಟಿ ರೂ. ವಂಚನೆ ಪ್ರಕರಣದ ಆರೋಪಿ, ಸಹಾಯಕ ವ್ಯವಸ್ಥಾಪಕನನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಡಾ. ಸುಮನ್ ಪೆನ್ನೇಕರ್ ತಿಳಿಸಿದ್ದಾರೆ.

ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದ ಕರೆಂಟ್ ಅಕೌಂಟ್ ನಿಂದ ತನ್ನ ಹೆಂಡತಿಯ ಖಾತೆಗೆ ಹಣ ವರ್ಗಾಯಿಸಿಕೊಂಡಿದ್ದ ಅಸಿಸ್ಟೆಂಟ್ ಮ್ಯಾನೇಜರ್, ಆಂಧ್ರಪ್ರದೇಶ ಮೂಲದ ಕುಮಾರ್ ಬೋನಾಲನನ್ನ ಕೊನೆಗೂ ಯಲ್ಲಾಪುರ ಪೊಲೀಸರು ಹುಬ್ಬಳ್ಳಿಯಲ್ಲಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಆರೋಪಿಯನ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಯ ವಿಚಾರಣೆಯನ್ನ ಪೊಲೀಸರು ಮುಂದುವರಿಸಿದ್ದಾರೆ.

ಆರೋಪಿಯ ವಿಚಾರಣೆಯ ವೇಳೆ ತಾನು ಲಪಟಾಯಿಸಿದ್ದ ಹಣವನ್ನೆಲ್ಲ ಆನ್ಲೈನ್ ಆಟದ ಗೀಳಿಗೆ ಬಿದ್ದು ಕಳೆದುಕೊಂಡಿರುವುದಾಗಿ ತಿಳಿಸಿದ್ದಾನೆ. ಸಿಕ್ಕ ಸಿಕ್ಕ ಆನ್ಲೈನ್ ಗೇಮ್ ಗಳನ್ನ ಆಡುವ ಚಟಕ್ಕೆ ಬಿದ್ದಿದ್ದ ಈತ, ಬ್ಯಾಂಕ್ ಅಕೌಂಟ್ ನಿಂದ ಹಣ ತೆಗೆಯುವುದು, ಆನ್ಲೈನ್ ನಲ್ಲಿ ಆಟವಾಡುವುದು ಮಾಡುತ್ತಿದ್ದರಿಂದ ಎಲ್ಲಾ ಹಣವನ್ನೂ ಆರೋಪಿ ಕಳೆದುಕೊಂಡಿದ್ದಾನೆ.

ಸದ್ಯ ಆನ್ಲೈನ್ ಗೇಮ್ ಆಡಿ ಆರೋಪಿ ತನ್ನ ಬಳಿಯಿದ್ದ ಎಲ್ಲ ಹಣವನ್ನ ಕಳೆದುಕೊಂಡಿದ್ದು, ಇದೀಗ 2.69 ಕೋಟಿ ಹಣದ ವಸೂಲಿ ಹೇಗೆ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ. ಆದರೆ ಈ ಬಗ್ಗೆ ಖಾತೆದಾರರಿಗೆ ಆತಂಕ ಬೇಡ. ಲೂಟಿಯಾಗಿರೋದು ಬ್ಯಾಂಕ್ ಕರೆಂಟ್ ಅಕೌಂಟ್ ಹಣ ಹೊರತು ಗ್ರಾಹಕರದ್ದಲ್ಲ ಎಂದು ಎಸ್ಪಿ ಮಾಹಿತಿ ನೀಡಿದರು

Sneha Gowda

Recent Posts

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

10 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

20 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

25 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

33 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

42 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

46 mins ago