ಕಾರವಾರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಹಲವಾರು ಫಲಾನುಭವಿಗಳು ಯೋಜನೆಗಳ ಲಾಭವನ್ನು ಪಡೆದುಕೊಂಡಿದ್ದಾರೆ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಹೇಳಿದರು.
ಕಾರವಾರದ ಬಿಣಗಾದಲ್ಲಿ ಬಿಜೆಪಿ ಕಾರವಾರ ನಗರ ಮಂಡಲದ ವತಿಯಿಂದ ಹಮ್ಮಿಕೊಂಡ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.
ಯೋಜನೆಗಳಿಂದ ವಂಚಿತರಾದವರು ಪ್ರಯೋಜನ ಪಡೆಯಬೇಕು. ಕೊರೊನಾ ಮಹಾಮಾರಿಯ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಎಲ್ಲರಿಗೂ ಉಚಿತ ಲಸಿಕೆ ನೀಡಿದ್ದಾರೆ. ವಿಶ್ವಕ್ಕೆ ಲಸಿಕೆಯನ್ನು ನೀಡುವಂತಹ ಸಾಧನೆ ಪ್ರತಿಯೊಬ್ಬನೂ ಹೆಮ್ಮೆಪಡುವ ವಿಷಯವಾಗಿದೆ ಎಂದರು.
ಆಕ್ಸಿಜನ್ಕೊರತೆಯಾದಾಗ ವಿದೇಶದಿಂದ ವ್ಯವಸ್ಥೆಯಾಗುವಂತೆ ನಮ್ಮ ಪ್ರಧಾನಿ ಮೋದಿ ಅವರು ಮಾಡಿದ್ದಾರೆ. ಕೋವಿಡ್ಸಂದರ್ಭದಲ್ಲಿ ಅನೇಕರು ಕಷ್ಟವನ್ನು ಅನುಭವಿಸಿದ್ದಾರೆ. ಆರೋಗ್ಯದಿಂದ ಇರುವವರು ರಾತ್ರಿ ಬೆಳಗಾಗುವುದರೊಳಗಾಗಿ ನಿಧನರಾಗಿದ್ದಾರೆ. ನಾವೆಲ್ಲರೂ ಕಷ್ಟದ ದಿನಗಳನ್ನು ಕಳೆದಿದ್ದೇವೆ. ಆದರೆ, ನಮ್ಮ ಪ್ರಧಾನಿಗಳು ಜನರ ಪ್ರಾಣ ರಕ್ಷಣೆಗೆ ಲಸಿಕೆಯನ್ನು ಜನರಿಗೆ ಉಚಿತವಾಗಿ ನೀಡಿದ್ದಾರೆ.
ಆರವತ್ತು ವರ್ಷ ಮೇಲ್ಪಟ್ಟವರು ಪಿಂಚಣಿ ಸೌಲಭ್ಯ ಪಡೆದುಕೊಳ್ಳುತ್ತಿಲ್ಲವೋ ಅವರು ಅದರ ಲಾಭ ಪಡೆದುಕೊಳ್ಳಬೇಕು. ಕಿಸಾನ್ಸಮ್ಮಾನ್ಕಾರ್ಡ್, ಜನ ಧನ್ಯೋಜನೆ, ಆಯುಷ್ಮಾನ್ಭಾರತ ಕಾರ್ಡ್ಎಲ್ಲವೂ ಜನೋಪಯೋಗಿ ಯೋಜನೆಯಾಗಿದೆ. ಹೀಗೆ ಅನೇಕ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ವೆಂಕಟೇಶ ನಾಯ್ಕ, ಕಾರವಾರ ನಗರ ಮಂಡಲ ಅಧ್ಯಕ್ಷರಾದ ನಾಗೇಶ ಕುರ್ಡೇಕರ, ಪಶ್ಚಿಮ ಘಟ್ಟಗಳ ಕಾರ್ಯಪಡೆ ಮುಖ್ಯಸ್ಥರಾದ ಗೋವಿಂದ ನಾಯ್ಕ, ಜಿಲ್ಲಾ ಪ್ರಮುಖರು, ವಿವಿಧ ಮೋರ್ಚಾದವರು, ಪದಾಧಿಕಾರಿಗಳು, ಕಾರ್ಯಕರ್ತರು, ಫಲಾನುಭವಿಗಳು ಉಪಸ್ಥಿತರಿದ್ದರು.