News Karnataka Kannada
Monday, April 29 2024
ಉತ್ತರಕನ್ನಡ

ಕಾರವಾರ: ಭೀಕರ ಅಪಘಾತ, ಬೈಕ್ ಸವಾರ ಸಾವು

Bike rider killed in road accident
Photo Credit : By Author

ಕಾರವಾರ: ಟೆಂಪೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಬೈಕ್ ಸವಾರ ಮೃತಪಟ್ಟ ಘಟನೆ ಕಾರವಾರ ತಾಲೂಕಿನ ಅಮದಳ್ಳಿಯಲ್ಲಿ ಸಂಭವಿಸಿದೆ. ಕುಮಟಾ ಮೂಲದ ಫೊಟೊಗ್ರಾಫರ್ ಮಹಾಬಲೇಶ್ವರ ಅಂಬಿಗ ಮೃತಪಟ್ಟವರು.

ಕಾರವಾರ ತಾಲೂಕಿನ ಅಮದಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್‌ನಲ್ಲಿ ಸಾಗುತ್ತಿದ್ದ ಮಹಾಬಲೇಶ್ವರ, ಏಕಾಏಕಿ ತಿರುವಿನಲ್ಲಿ ಬೈಕ್ ತಿರುಗಿಸಿದ್ದಾರೆ. ಈ ಸಂದರ್ಭದಲ್ಲಿ ಬೈಕ್‌ನ ಹಿಂದೆ ಬರುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣಕ್ಕೆ ಸಿಗದೆ ಮುಂದೆ ಏಕಾಏಕಿ ತಿರುಗಿದ್ದ ಮಹಾಬಲೇಶ್ವರ ಅವರ ಬೈಕ್‌ಗೆ ಡಿಕ್ಕಿಯಾಗಿದೆ.

ಟೆಂಪೋ ಡಿಕ್ಕಿಯಾದ ರಭಸಕ್ಕೆ ಬೈಕ್‌ನಲ್ಲಿದ್ದ ಮಹಾಬಲೇಶ್ವರ ಅವರು ಬೈಕ್ ಸಮೇತ ಹಾರಿ ಎದುರು ಚಲಿಸುತ್ತಿದ್ದ ಕಾರಿಗೆ ಬಡಿದು ರಸ್ತೆಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಮಹಾಬಲೇಶ್ವರ ಗಂಭೀರ ಗಾಯಗೊಂಡಿದ್ದರು. ಇದೇ ಮಾರ್ಗದಲ್ಲಿ ಸಾಗುತ್ತಿದ್ದ ಶಾಸಕಿ ರೂಪಾಲಿ ನಾಯ್ಕ ಸ್ಥಳದಲ್ಲೇ ಕೆಲ ಕಾಲ ನಿಂತು, ಅಂಬ್ಯುಲೆನ್ಸ್, ಆಸ್ಪತ್ರೆಗೆ ಕರೆ ಮಾಡುವಲ್ಲಿ ಸಹಕರಿಸಿದರು. ಆದರೆ ಅಂಬ್ಯುಲೆನ್ಸ್ ಸ್ಥಳಕ್ಕೆ ಬರುವುದು ವಿಳಂಬವಾದ ಕಾರಣ ಶಾಸಕಿ ಐಆರ್ಬಿ ವಾಹನವನ್ನ ಸ್ಥಳಕ್ಕೆ ಕರೆಯಿಸಿದ್ದಾರೆ. ಐಆರ್ಬಿ ವಾಹನದಲ್ಲಿ ಕ್ರಿಮ್ಸ್ ಗೆ ಸಾಗಿಸುವ ಮಾರ್ಗಮಧ್ಯೆ ಅಂಬ್ಯುಲೆನ್ಸ್ ಸಿಕ್ಕಿದ್ದು, ಬಳಿಕ ಅದಕ್ಕೆ ಸ್ಥಳಾಂತರಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟರಲ್ಲಾಗಲೇ ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಾಬಲೇಶ್ವರ ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು