ಉತ್ತರಕನ್ನಡ

ಕಾರವಾರ: ಸತೀಶ ಜಾರಕಿಹೊಳಿ ವಿರುದ್ಧ ಎಸ್ಪಿ ಕಚೇರಿ ಬಳಿಕ ಬಿಜೆಪಿಗರಿಂದ ಪ್ರತಿಭಟನೆ

ಕಾರವಾರ: ಹಿಂದೂ ಎಂಬುದು ಪರ್ಷಿಯನ್ ಭಾಷೆಯಲ್ಲಿ ಅಶ್ಲೀಲ ಪದ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಯಮಕಾನ್ಮರಡಿ ಶಾಸಕ ಸತೀಶ ಜಾರಕಿಹೊಳಿ ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬುಧವಾರ ಮನವಿ ಸಲ್ಲಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸತೀಸ್  ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿದರು. ಕಾಂಗ್ರೆಸ್ ಪಕ್ಷವು ಭಾರತದ ಜೊತೆ ಸಂಪರ್ಕತಪ್ಪಿಸಿಕೊಂಡಿದೆದೇಶ- ಧರ್ಮದ ಬಗ್ಗೆ ಅರಿವಿಲ್ಲದೆ ಅಜ್ಞಾನದ ಮನಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮಾತನಾಡುತ್ತಿದ್ದಾರೆ.

ಹಿಂದೂ ಎಂದರೆ ಒಂದು ಜೀವನ ಪದ್ಧತಿ. ಇದನ್ನು ಒಡೆದು ಆಳಲು ಬ್ರಿಟಿಷರು ಆರ್ಯ- ದ್ರಾವಿಡ ಎಂಬ ಸಂಸ್ಕೃತಿಯನ್ನು ಬಿಂಬಿಸಿದರು. ಕಾಂಗ್ರೆಸ್ ಪಕ್ಷವು ಮತ್ತೆ ಮತ್ತೆ ಅದನ್ನು ಪುನರುಚ್ಚಾರ ಮಾಡುತ್ತಿದೆ ಎಂದುಆರೋಪಿಸಿದರು.ದೇಶದ ಮೂಲ ಸಂಸ್ಕೃತಿ ಹಿಂದೂ ಹೆಸರಿನಲ್ಲೇ ಬಂದಿದೆ. ಆದರೆ, ಪ್ರಸ್ತುತ ನಾವು ಈ  ದೇಶದ ಹಿಂದೂ ಧರ್ಮ ಸನಾತನ ಧರ್ಮ, ಶ್ರೇಷ್ಠ, ಅತ್ಯಂತ ಪುರಾತನ, ಗೌರವಯುತವಾದುದು ಎಂದೇ ತಿಳಿದಿದ್ದೇವೆ.ಸಮಗ್ರ ಮಾನವ ಜೀವನಕ್ಕೆ ಬೇಕಾದ ಒಂದು ಜೀವನ ಪದ್ಧತಿಯ ಅಡಕವು ಆ ಶಬ್ದದ  ಒಳಗೆ ಅಡಗಿದೆ.ಯಾರೋ ಒಬ್ಬರು ಅದನ್ನು ಅರ್ಥ ಮಾಡಿಕೊಳ್ಳದೆ ಹೇಗ್ಹೇಗೋ ವರ್ಣನೆ ಮಾಡಿದರೆ  ಹಿಂದೂಧರ್ಮದ ಮೌಲ್ಯ ಕಡಿಮೆ ಆಗದು. ಕಾಂಗ್ರೆಸನ ಕನೆಕ್ಟಿವಿಟಿ ಈ ದೇಶದಿಂದ ತಪ್ಪಿ ಹೋಗಿರುವುದನ್ನುಈ ಹೇಳಿಕೆ ಮೂಲಕ ಅರ್ಥ ಮಾಡಿಕೊಳ್ಳಬಹುದು ಎಂದು ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಶಾಸಕ ಸತೀಶ ಜಾರಕಿಹೊಳಿಯವರು ಬಹುಸಂಖ್ಯಾತ ಹಿಂದುಗಳನಿಂದಿಸಿದ್ದಲ್ಲದೆ ನಮ್ಮ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ. ಕೂಡಲೇ ಇಂತಹ ಸಮಾಜ ಘಾತುಕ ಕೃತ್ಯವೆಸಗಿದವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಈ ವೇಳೆ ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ, ಶಾಸಕಿ ರೂಪಾಲಿ ನಾಯ್ಕ, ಎಂಎಲ್ಸಿ ಗಣಪತಿ ಉಳ್ವೇಕರ್,  ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಗೋವಿಂದ ನಾಯಕ, ಜಿಲ್ಲಾ ಮಾಧ್ಯಮ ವಕ್ತಾರ ನಾಗರಾಜನಾಯಕ, ನಯನಾ ಲೀಲಾವರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Ashika S

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

25 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

50 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago