News Karnataka Kannada
Sunday, April 28 2024
ಉತ್ತರಕನ್ನಡ

ಕಾರವಾರ: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ರಕ್ತದಲ್ಲಿ ಪಿಎಂಗೆ ಪತ್ರ ಬರೆಯುವ ಅಭಿಯಾನ

Karwar: Campaign to write letter to PM in blood for multi-specialty hospital
Photo Credit : By Author

ಕಾರವಾರ:  ಜಿಲ್ಲೆಯ ಜನರ ಸುರಕ್ಷತೆಗಾಗಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಬೇಡಿಕೆ ಜೋರಾಗಿದ್ದು ಅದರ ಭಾಗವಾಗಿ ನಗರದಲ್ಲಿ  ಈಗ ಪ್ರಧಾನಿ ನರೇಂದ್ರ ಮೋದಿಗೆ  ಅವರಿಗೆ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಿದ್ದಾರೆ.

ಕಾರವಾರದ ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ರಾಘು ನಾಯ್ಕ ನೇತೃತ್ವದಲ್ಲಿ ಹಲವು ಸಂಘಟನೆಯ ಪದಾಧಿಕಾರಿಗಳು, ವಿವಿಧ ಕಾಲೇಜಿನ ವಿದ್ಯಾರ್ಥಿಗಳ ನಗರದ ನಗರಸಭೆ ಕಚೇರಿಯ ಹೊರ ಭಾಗದಲ್ಲಿ ಟೆಂಟ್ ಹಾಕಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿದರು.

ಬಳಿಕ ತಮ್ಮ ರಕ್ತದ ಮೂಲಕ ಜಿಲ್ಲೆಯಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಪತ್ರ ಬರೆಯುವ ಮೂಲಕ ಗಮನ ಸೆಳೆದರು. ಆಂಬುಲೇನ್ಸ್ ಭೀಕರ ಅಪಘಾತದ ಬಳಿಕ ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಗಾಗಿ ಕೂಗು ಜೋರಾಗತೊಡಗಿದೆ.

ಟ್ವಿಟ್ಟರ್ ಅಭಿಯಾನ, ಉಪವಾಸ ಸತ್ಯಾಗ್ರಹ, ಅಣಕು ಪ್ರತಿಭಟನೆ ಹೀಗೆ ಹತ್ತಾರು ರಿತಿಯಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಿದ ಮಂದಿ ಒಕ್ಕೋರಲಿನಿಂದ ಆಸ್ಪತ್ರೆಗಾಗಿ ಒತ್ತಾಯಿಸುತ್ತಿದ್ದಾರೆ.

ಜಿಲ್ಲೆಯ ಜನಪ್ರತಿನಿಧಿಗಳು ಹೋರಾಟ ಬೆನ್ನಲ್ಲೆ ಅಲ್ಲಿ ಮಾಡಲಾಗುತ್ತದೆ, ಇಲ್ಲಿ ಮಾಡಲಾಗುತ್ತಿದೆ ಎಂದು ಹೇಳಿಕೆ ಬಿಡುಗಡೆ  ಮಾಡಿದ್ದನ್ನು ಬಿಟ್ಟರೆ ಈವರೆಗೂ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡುವ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಬಿಡುಗಡೆಯಾಗಿಲ್ಲ.

ಆದರೆ ಇದರಿಂದ ರೊಚ್ಚಿಗೆದ್ದಿರುವ ಜನರು ಇದೀಗ ಪ್ರಧಾನಿ ನರೇಂದ್ರ ಮೋದಿಗೆ ರಕ್ತದಿಂದ ಪತ್ರ ಬರೆಯುವ ಚಳುವಳಿ ಆರಂಭಿಸಿದ್ದಾರೆ.

ಕಾರವಾರದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು, ವೃದ್ಧರು, ಮಹಿಳೆಯರು ರಕ್ತದಿಂದ ಪ್ರಧಾನಿಗೆ ಪತ್ರ ಬರೆದು ಉತ್ತರಕನ್ನಡಕ್ಕೆ ಸುಸಜ್ಜಿತ ಆಸ್ಪತ್ರೆ ನಿರ್ಮಿಸಿಕೊಡುವಂತೆ ಆಗ್ರಹಿಸಿದ್ದಾರೆ.

85 ವರ್ಷದ ಹಾಸಿಗೆಯಲ್ಲಿಯೇ ಇರುವ ವೃದ್ಧೆ, 8 ತಿಂಗಳ ಗರ್ಭೀಣಿ ಸ್ವಯಂ ಪ್ರೇರಿತರಾಗಿ ಹೋರಾಟಕ್ಕೆ ಬಂದು ಪ್ರಧಾನಿಗೆ ಪತ್ರ ಬರೆದು ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಗಾಗಿ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು