News Karnataka Kannada
Saturday, May 04 2024
ಉತ್ತರಕನ್ನಡ

ಕಾರವಾರ: ಜಾತಿ ನಿಂದನೆ ಪ್ರಕರಣ, ಎಸ್. ಎಲ್. ಘೋಟ್ನೇಕರ್ ಗೆ ಜಾಮೀನು

Casteist slur case L. Ghotnekar granted bail
Photo Credit : By Author

ಕಾರವಾರ: ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣದಲ್ಲಿ ನಗರದ 2 ನೇ ಸೆಷನ್ಸ್ ನ್ಯಾಯಾಲಯವು ಜಾಮೀನು ನೀಡಿದೆ.

ದಲಿತರೊಬ್ಬರಿಗೆ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಘೋಟ್ನೇಕರ ಅವರ ವಿರುದ್ಧ 2019 ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆಯಲು ಎಸ್.ಎಲ್.ಘೋಟ್ನೇಕರ್ ಅವರು ಜಿಲ್ಲಾ ನ್ಯಾಯಾಲಯ, ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಗಳಲ್ಲಿ ಪ್ರಯತ್ನಿಸಿದ್ದರು. ಬಳಿಕ ಜಿಲ್ಲಾ ನ್ಯಾಯಾಲಯದಲ್ಲಿ ಶರಣಾಗಿ ಜಾಮೀನು ಪಡೆಯುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಈ ಹಿನ್ನೆಲೆಯಲ್ಲಿ 2ನೇ ಸೆಷನ್ಸ್ ನ್ಯಾಯಾಧೀಶರ ಎದುರು ಹಾಜರಾದ ಎಸ್.ಎಲ್. ಘೋಟ್ನೇಕರ ಅವರು, ಜಾಮೀನು ಅರ್ಜಿ ಸಲ್ಲಿಸಿದ್ದರು. ಎಸ್.ಎಲ್. ಘೋಟ್ನೇಕರ್ ಅವರ ಶರಣಾಗತಿಯನ್ನು ಪರಿಗಣಿಸಿದ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರಿ ಮಾಡಿದೆ.ಕಾರವಾರದ ನ್ಯಾಯವಾದಿ ಜಿ.ಟಿ.ನಾಯ್ಕ ಅವರು ಈ ಪ್ರಕರಣದಲ್ಲಿ ಎಸ್.ಎಲ್.ಘೋಟ್ನೇಕರ್ ಅವರ ಪರ ವಾದ ಮಂಡಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು