ಕಾರವಾರ: ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ್ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣದಲ್ಲಿ ನಗರದ 2 ನೇ ಸೆಷನ್ಸ್ ನ್ಯಾಯಾಲಯವು ಜಾಮೀನು ನೀಡಿದೆ.
ದಲಿತರೊಬ್ಬರಿಗೆ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಘೋಟ್ನೇಕರ ಅವರ ವಿರುದ್ಧ 2019 ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆಯಲು ಎಸ್.ಎಲ್.ಘೋಟ್ನೇಕರ್ ಅವರು ಜಿಲ್ಲಾ ನ್ಯಾಯಾಲಯ, ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಗಳಲ್ಲಿ ಪ್ರಯತ್ನಿಸಿದ್ದರು. ಬಳಿಕ ಜಿಲ್ಲಾ ನ್ಯಾಯಾಲಯದಲ್ಲಿ ಶರಣಾಗಿ ಜಾಮೀನು ಪಡೆಯುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಈ ಹಿನ್ನೆಲೆಯಲ್ಲಿ 2ನೇ ಸೆಷನ್ಸ್ ನ್ಯಾಯಾಧೀಶರ ಎದುರು ಹಾಜರಾದ ಎಸ್.ಎಲ್. ಘೋಟ್ನೇಕರ ಅವರು, ಜಾಮೀನು ಅರ್ಜಿ ಸಲ್ಲಿಸಿದ್ದರು. ಎಸ್.ಎಲ್. ಘೋಟ್ನೇಕರ್ ಅವರ ಶರಣಾಗತಿಯನ್ನು ಪರಿಗಣಿಸಿದ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರಿ ಮಾಡಿದೆ.ಕಾರವಾರದ ನ್ಯಾಯವಾದಿ ಜಿ.ಟಿ.ನಾಯ್ಕ ಅವರು ಈ ಪ್ರಕರಣದಲ್ಲಿ ಎಸ್.ಎಲ್.ಘೋಟ್ನೇಕರ್ ಅವರ ಪರ ವಾದ ಮಂಡಿಸಿದ್ದರು.